Publish Date: Thu, 18 May 2023 (12:38 IST)
Updated Date: Thu, 18 May 2023 (12:40 IST)
ಮಂಡ್ಯದಲ್ಲಿ ಜೆಡಿಎಸ್ ವಿರುದ್ದ ಸಂಸದೆ ಸುಮಲತಾ ಅಂಬರೀಷ್ ಸಿಡಿದೆದಿದ್ದಾರೆ. ಜೆಡಿಎಸ್ ಸೋಲಿಸಿದ್ದಕ್ಕೆ ಮಂಡ್ಯ ಜನಕ್ಕೆ ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ್ದಾರೆ.. ಭ್ರಷ್ಟಾಚಾರ, ಕುಟುಂಬ ರಾಜಕಾರಣದ ವಿರುದ್ದ ನನ್ನ ಸಮರ ಎಂದಿದ್ದ ಸಂಸದೆ ಸುಮಲತಾ ಇದೀಗ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ... ಬಿಜೆಪಿಗೆ ಮತ ಹಾಕಿದ ಸರ್ವರಿಗೂ ಹಾಗೂ ಚುನಾವಣೆಯಲ್ಲಿ ಶ್ರಮಿಸಿದವರಿಗೆ ನನ್ನ ಕೃತಜ್ಞತೆಗಳು... ಗೆಲುವು ಹಾಗೂ ಸೋಲು ಚುನಾವಣೆಯ ಭಾಗವಾಗಿದೆ... ನಾವೂ ಧೈರ್ಯವನ್ನು ಕಳೆದುಕೊಳ್ಳದೇ ಇರುವುದು ಅತ್ಯಂತ ಮುಖ್ಯವಾಗಿದೆ... ವಿಶೇಷವಾಗಿ ಈ ಬಾರಿ ಭ್ರಷ್ಟ ಹಾಗೂ ದುರಹಂಕಾರಿ ಕುಟುಂಬ ರಾಜಕಾರಣದ ವಿರುದ್ಧನಿರ್ಣಾಯಕವಾಗಿ ಮತ ಚಲಾಯಿಸಿದ್ದಕ್ಕೆ ಮಂಡ್ಯ ಜನತೆಗೆ ಧನ್ಯವಾದಗಳು... ಕರ್ನಾಟಕ ಜನತೆ ನೀಡಿರುವ ಜನಾದೇಶವನ್ನು ವಿನಮ್ರವಾಗಿ ನಾನು ಗೌರವಿಸುವೆ...ಜೆಡಿಎಸ್ ಸೋಲಿಸಿದ್ದಕ್ಕೆ ಧನ್ಯವಾದ ಎಂದು ಟ್ವೀಟ್ ಮಾಡಿದ್ದಾರೆ