Webdunia - Bharat's app for daily news and videos

Install App

ಬುದ್ಧಿಮಾಂದ್ಯ ತಮ್ಮನ ಎದುರಲ್ಲೇ ಯುವತಿ ಮಾಡಿದಳು ಆ ಕೆಲಸ

Webdunia
ಶುಕ್ರವಾರ, 20 ಸೆಪ್ಟಂಬರ್ 2019 (22:28 IST)
ಬುದ್ಧಿಮಾಂದ್ಯ ತಮ್ಮನ ಎದುರಲ್ಲೇ ಯುವತಿಯೊಬ್ಬಳು ಮಾಡಬಾರದ ಕೆಲಸ ಮಾಡಿದ್ದಾಳೆ.

ಕೆಲಸವಿಲ್ಲದೆ ಜೀವನ ನಡೆಸಲು ಸಾಧ್ಯವಾಗದೇ ಯುವತಿ ಮನನೊಂದು ಬುದ್ದಿಮಾಂದ್ಯ ತಮ್ಮನ ಎದುರಲ್ಲಿಯೇ ನೇಣಿಗೆ ಶರಣಾಗಿರುವಂತಹ ದಾರುಣ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಅತ್ತಿಬೆಲೆಯಲ್ಲಿ ನಡೆದಿದೆ.

ಅತ್ತಿಬೆಲೆಯ ನಾಗಲಿಂಗೇಶ್ವರ ದೇವಸ್ಥಾನದ ಬಳಿಯ ನಿವಾಸಿ ಮಂಜುಳಾ ಮೃತ ಯುವತಿಯಾಗಿದ್ದು, ಓರ್ವ ತಂಗಿ, ತಾಯಿ ಹಾಗೂ ಬುದ್ದಿಮಾಂದ್ಯ ತಮ್ಮನ ಜೊತೆ ಜೀವನ ನಡೆಸುತ್ತಿದ್ದರು. ಮನೆಯ ಹಿರಿಯ ಮಗಳಾದ ಕಾರಣ ಕುಟುಂಬದ ಜವಾಬ್ದಾರಿ ಸಂಪೂರ್ಣ ಮಂಜುಳ  ಮೇಲೆ ಇದ್ದಿತು. ಈಕೆ ಖಾಸಗಿ ಗಾರ್ಮೆಂಟ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು.

ಆದ್ರೆ ಕಳೆದ ವಾರ ಕಂಪನಿಯವರು ಬೇಡಿಕೆ ಇಲ್ಲವೆಂದು ಕೆಲಸದಿಂದ ತೆಗೆದು ಹಾಕಿದ್ದು, ಕೆಲಸ ವಿಲ್ಲದೆ ಜೀವನ ನಡೆಸಲಾಗದೆ ಮನನೊಂದು  ತಾಯಿ‌ ಮನೆಗೆ ಬೇಕಾದ ದಿನಸಿ ತರಲು ಅಂಗಡಿಗೆ ಹೋಗಿದ್ದಾಗ ಬುದ್ದಿ ಮಾಂದ್ಯ ತಮ್ಮನ ಎದುರಲ್ಲಿಯೇ ನೇಣು ಬಿಗಿದುಕೊಂಡು ಯುವತಿ ಸಾವನ್ನಪ್ಪಿದ್ದಾರೆ. ಇನ್ನು ಘಟನೆ ಸಂಬಂಧ ಅತ್ತಿಬೆಲೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments