ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 143 ವಿದ್ಯಾರ್ಥಿಗಳಿಗೆ 35,000 ರೂ. ಪ್ರೋತ್ಸಾಹ ಧನ

Webdunia
ಶನಿವಾರ, 18 ಜೂನ್ 2022 (20:13 IST)
ಬಿಬಿಎಂಪಿ ವಿದ್ಯಾ ಇಲಾಖೆಯಲ್ಲಿ ಒಟ್ಟು 15 ಪದವಿ ಪೂರ್ವ ಕಾಲೇಜುಗಳಿದ್ದು, 2021-2ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 2,167 ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 1,396 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ. 64.42 ರಷ್ಟು ಫಲಿತಾಂಶ ಬಂದಿದೆ. ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 2,167 ವಿದ್ಯಾರ್ಥಿಗಳ ಪೈಕಿ 143 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಪೈಕಿ ಬಿಬಿಎಂಪಿ ಪಾದರಾಯನಪುರ ಪದವಿ ಪೂರ್ವ ಕಾಲೇಜು ಶೇ. 90 ರಷ್ಟು ಫಲಿತಾಂಶವನ್ನು ನೀಡಿ ಮೊದಲ ಸ್ಥಾನ, ಬಿಬಿಎಂಪಿ ಪದವಿ ಪೂರ್ವ ಕಾಲೇಜು ಭೈರವೇಶ್ವರ ನಗರ ಶೇ. 83.92 ರಷ್ಟು ಫಲಿತಾಂಶವನ್ನು ನೀಡಿ ಎರಡನೇ ಸ್ಥಾನ, ಬಿಬಿಎಂಪಿ ಪದವಿ ಪೂರ್ವ ಕಾಲೇಜು ಜೋಗುಪಾಳ್ಯ ಶೇ. 76.00 ರಷ್ಟು ಫಲಿತಾಂಶವನ್ನು ನೀಡಿ ಮೂರನೇ ಸ್ಥಾನವನ್ನು ಪಡೆದಿರುತ್ತದೆ. ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 143 ವಿದ್ಯಾರ್ಥಿಗಳಿಗೂ ಪಾಲಿಕೆ ವತಿಯಿಂದ ತಲಾ 35,000 ರೂ. ಗಳ ಪ್ರೋತ್ಸಾಹ ಧನ ನೀಡಿ ಗೌರವಿಸಲಾಗುತ್ತದೆ. ಎಂದು ಪಾಲಿಕೆಯ ವಿದ್ಯಾ ಇಲಾಖೆಯು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಭಿನಂದಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments