Webdunia - Bharat's app for daily news and videos

Install App

ಪಾದಚಾರಿಗೆ ಡಿಕ್ಕಿ ಹೊಡೆದು ಆರೋಪಿ ಪರಾರಿ

Webdunia
ಭಾನುವಾರ, 10 ಅಕ್ಟೋಬರ್ 2021 (21:44 IST)
ಬೆಂಗಳೂರು: ಪಾದಚಾರಿಗೆ ಡಿಕ್ಕಿ ಹೊಡೆದು ಆರೋಪಿ ಪರಾರಿಯಾಗಿದ್ದ ಪ್ರಕರಣದ ತನಿಖೆ ಕೈಗೊಂಡಿದ್ದ ಪೊಲೀಸರು ಸುಮಾರು 58 ಸಿಸಿ ಕ್ಯಾಮರಾ ಪರಿಶೀಲನೆ ಬಳಿಕ ಆರೋಪಿ ಮತ್ತು ಆತನ ಕಾರನ್ನು ಪತ್ತೆ ಹಚ್ಚಿದ್ದಾರೆ.
ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಸ್ತೂರಿ ನಗರ 2ನೇ ಮುಖ್ಯರಸ್ತೆಯಲ್ಲಿ ಪಾದಚಾರಿಗೆ ಡಿಕ್ಕಿ ಹೊಡೆದ ಬಳಿಕ ಕಾರು ಸಹಿತ ಚಾಲಕ ಪರಾರಿಯಾಗಿದ್ದ. ಬಳಿಕ ಗಾಯಾಳುವನ್ನು ಚಿಕಿತ್ಸೆಗಾಗಿ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗಾಯಾಳು ಮೃತಪಟ್ಟಿದ್ದ. ಈ ಸಂಬಂಧ ಕೆ.ಆರ್.ಪುರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದರು.
ಮೃತನ ಕುಟುಂಬಕ್ಕೆ ನ್ಯಾಯ ಕೊಡಿಸಲು ಸಾಕಷ್ಟು ಪರಿಶ್ರಮ ಪಟ್ಟು ಸುಮಾರು 58 ಸಿಸಿ ಕ್ಯಾಮರಾಗಳನ್ನು ಪರಿಶೀಲನೆ ಮಾಡಿ ಕೊನೆಗೂ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಕೆ.ಆರ್.ಪುರ ಸಂಚಾರಿ ಪೊಲೀಸ್ ಠಾಣಾಧಿಕಾರಿ ಮಹಮದ್ ಎಂ.ಎ ಅವರ ನೇತೃತ್ವದಲ್ಲಿ ತನಿಖೆ ನಡೆಸಲಾಗಿತ್ತು. ಅಪಘಾತದ ನಂತರ ಚಾಲಕ ಹಲವು ರಸ್ತೆಗಳಲ್ಲಿ ಸಂಚರಿಸಿ ಒಂದು ಜೆರಾಕ್ಸ್ ಅಂಗಡಿಗೆ ತೆರಳಿ ಅಲ್ಲಿ ಯಾವುದೋ ದಾಖಲಾತಿಗಳನ್ನು ಜೆರಾಕ್ಸ್ ಮಾಡಿಸಿಕೊಂಡ ಬಗ್ಗೆ ಮಾಹಿತಿ ಕಲೆಹಾಕಿದ ಪೊಲೀಸರು ಅಂಗಡಿಯಲ್ಲಿ ವಿಚಾರಿಸಿದಾಗ ಆರೋಪಿಯ ಭಾವಚಿತ್ರ ಲಭ್ಯವಾಗಿದೆ. ಭಾವಚಿತ್ರವನ್ನು ಸ್ಥಳೀಯ ಗ್ಯಾಸ್, ಹಾಲು, ಪತ್ರಿಕೆ ವಿತರಕ ಹುಡುಗರು ಮತ್ತು ಇತರ ಸಾರ್ವಜನಿಕರಿಗೆ ತೋರಿಸಿದಾಗ ಆರೋಪಿಯ ಮಾಹಿತಿ ಲಭ್ಯವಾಗಿದೆ.
ನಂತರ ವಿಳಾಸ ಪಡೆದುಕೊಂಡು ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ ನಂತರ, ಚಾಲಕ ನೇರವಾಗಿ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆದು ಠಾಣೆಗೆ ಹಾಜರಾಗಿದ್ದಾರೆ. ಆರೋಪಿಯನ್ನು ಶ್ರೀಧರ್ ಎಂದು ಗುರುತಿಸಲಾಗಿದೆ.
ಆರೋಪಿ ಶ್ರೀಧರ್​ ಎಚ್‍ಎಎಲ್ ನಿವೃತ್ತ ನೌಕರನಾಗಿದ್ದು, ಅಪಘಾತದ ದಿನ ವಿಪರೀತ ಮಳೆ ಇದ್ದುದರಿಂದಾಗಿ ಕಾರು ನಿಲ್ಲಿಸದೇ ಹೊರಟು ಹೋಗಿರುವುದಾಗಿ ಪೊಲೀಸರ ಮುಂದೆ ತಪ್ಪೊಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಕೆ.ಆರ್.ಪುರ ಸಂಚಾರಿ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments