Webdunia - Bharat's app for daily news and videos

Install App

ಮೈತ್ರಿ ಸರಕಾರ ಪತನಕ್ಕೆ ಮುಂದುವರಿದ ಯತ್ನ

Webdunia
ಗುರುವಾರ, 20 ಜೂನ್ 2019 (16:26 IST)
ಲೋಕಸಮರಕ್ಕಾಗಿ ಒಂದಷ್ಟು ದಿನ ತೆರೆಮರೆಗೆ ಸರಿದಿದ್ದ ಆಪರೇಷನ್ ಕಮಲ ಚಟುವಟಿಕೆ ಈಗ ತೀವ್ರಗೊಂಡಿದೆ ಎಂಬ ಚರ್ಚೆ ಶುರುವಾಗಿದೆ.

ಲೋಕಸಭೆ ಚುನಾವಣೆಯಲ್ಲಿ ಅದ್ಭುತ ಜಯ ದಾಖಲು ಮಾಡಿರುವ ಬಿಜೆಪಿ ಕೇಂದ್ರದಲ್ಲಿ ಸರಕಾರ ರಚನೆ ಮಾಡಿದೆ. ಇದರ ಬೆನ್ನಲ್ಲೇ ರಾಜ್ಯದಲ್ಲಿ ಮೈತ್ರಿ ಸರಕಾರ ಪತನಕ್ಕೆ ಸ್ಕೆಚ್ ರೆಡಿಮಾಡುತ್ತಿದೆ. ರಾಜ್ಯದ ಸರಕಾರದ ಸಂಪುಟ ವಿಸ್ತರಣೆ, ಕೈ ಹಾಗೂ ತೆನೆ ಪಕ್ಷಗಳ ಶಾಸಕರ ಅಸಮಧಾನವನ್ನೇ ಬಿಜೆಪಿ ಟಾರ್ಗೆಟ್ ಮಾಡುತ್ತಿದ್ದು, ಆಯಾ ಶಾಸಕರಿಗೆ ಸದ್ದಿಲ್ಲದೇ ಗಾಳ ಹಾಕುತ್ತಿದೆ ಎಂಬ ವಿಷಯ ಹರಿದಾಡುತ್ತಿದೆ.

ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೂಡ ಇದನ್ನು ಹೇಳಿದ್ದು, ಬಿಜೆಪಿ ಆಪರೇಷನ್ ಕಮಲ ಮುಂದುವರಿಸಿದೆ ಎಂದು ದೂರಿದ್ದಾರೆ.
ಲೋಕಸಮರದ ಫಲಿತಾಂಶ ಬಳಿಕ ಮೈತ್ರಿ ಸರಕಾರ ತಾನಾಗಿಯೇ ಪತನಗೊಳ್ಳುತ್ತದೆ ಎಂದು ಬಿಜೆಪಿ ನಾಯಕರು ಭಾವಿಸಿದ್ದರು. ಆದರೆ ಅದು ಸಾಧ್ಯವಾಗಿಲ್ಲ. ಹೀಗಾಗಿ ಮೈತ್ರಿ ಪಕ್ಷಗಳ ಅತೃಪ್ತರನ್ನ ಬಿಜೆಪಿಗೆ ಸೇರ್ಪಡೆಗೊಳಿಸಿಕೊಳ್ಳಲು ಕಮಲ ಪಾಳೆಯ ಸನ್ನದ್ಧಗೊಂಡಿದೆ.

ಬಿ.ಎಸ್.ಯಡಿಯೂರಪ್ಪ ಕಳೆದ ವಾರ ದೆಹಲಿಗೆ ತೆರಳಿದ್ದಾಗ ಅಮಿತ್ ಶಾ ಭೇಟಿ ಬಳಿಕ ಕಮಲ ಪಾಳೆಯ ಮತ್ತಷ್ಟು ರಾಜ್ಯದಲ್ಲಿ ಚುರುಕಾಗಿದೆ. ಅತೃಪ್ತ ಶಾಸಕರೇ ಈಗ ಬಿಜೆಪಿ ಸೇರಲು ಸಿದ್ಧರಾಗಿರುವಾಗ ವಿಳಂಬ ಮಾಡುವುದಕ್ಕೆ ಬಿಜೆಪಿಗೆ ಇಷ್ಟವಿಲ್ಲ ಎನ್ನಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಮುಂದಿನ ಸುದ್ದಿ
Show comments