Webdunia - Bharat's app for daily news and videos

Install App

ಅಧಿವೇಶನಕ್ಕೆ ಮುನ್ನ ಮೈತ್ರಿ ಸರ್ಕಾರ ಖತಂ!

Webdunia
ಭಾನುವಾರ, 3 ಫೆಬ್ರವರಿ 2019 (21:37 IST)
ರಾಜ್ಯದ ಸಮ್ಮಿಶ್ರ ಸರ್ಕಾರದ ಪತನದ ಬಗ್ಗೆ ಬಿಜೆಪಿ ನಾಯಕರು ನಿರಂತರವಾಗಿ ಪ್ರತ್ಯೇಕ ಹೇಳಿಕೆ ನೀಡುತ್ತಲೆ ಇದ್ದಾರೆ. ಈ ಸರ್ಕಾರ ಪಥನವಾಗುವುದು ನಿಶ್ಚಿತ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಜೆಟ್ ಮಂಡನೆ ಮಾಡುತ್ತಾರೋ, ಇಲ್ಲವೋ ಎಂಬುದು ಅನುಮಾನ ಎಂದಿದ್ದಾರೆ.

ಕಾಂಗ್ರೆಸ್ ಒಳಜಗಳ, ಅತೃಪ್ತಿ, ಅಸಮಾಧಾನಗಳು ಪರಾಕಾಷ್ಠೆ ತಲುಪಿದೆ. ಕಾಂಗ್ರೆಸ್ ಕೆಲ ಅತೃಪ್ತ ಶಾಸಕರು ಕಾಂಗ್ರೆಸ್ ಹಿರಿಯ ನಾಯಕರ ಸಂಪರ್ಕಕ್ಕೆ ಬರುತ್ತಿಲ್ಲ. ಕಣ್ಮರೆಯಾಗಿದ್ದಾರೆ. ಕಾಂಗ್ರೆಸ್ ಕೋಟೆಯೊಳಗೆ ಆವರ ಸೈನಿಕರಿಂದಲೇ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಸದಾನಂದಗೌಡ ಹೇಳುವ ಮೂಲಕ ಸರ್ಕಾರ ಹೆಚ್ಚು ದಿನ ಬಾಳಲ್ಲ ಎಂಬ ಸುಳಿವು ನೀಡಿದರು.

ಬಿಜೆಪಿಯ ರೈತ ಮೋರ್ಚಾದ ಅಧ್ಯಕ್ಷ ಹಾಗೂ ಮಾಜಿ ಸಚಿವ ಲಕ್ಷ್ಮಣ್ಸವದಿ ಸಹ ಸರ್ಕಾರ ಉಳಿಯುವುದಿಲ್ಲ. ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಉರುಳಿಸುತ್ತಾರೆ ಎಂದು ಮಾರ್ಮಿಕವಾಗಿ ಹೇಳಿದರು.  ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಸಹ ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡನೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments