Webdunia - Bharat's app for daily news and videos

Install App

ಅಟಲ್ ಜೀ ಚಿತಾಭಸ್ಮ ರಾಜಧಾನಿಗೆ ಆಗಮನ

Webdunia
ಬುಧವಾರ, 22 ಆಗಸ್ಟ್ 2018 (19:40 IST)
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮ ರಾಜಧಾನಿಗೆ ಆಗಮಿಸಿದೆ.

ದೇಶ ಕಂಡ ಅಪರೂಪದ ರಾಜಕಾರಣಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮ ರಾಜಧಾನಿ ಬೆಂಗಳೂರಿಗೆ ಆಗಮಿಸಿದೆ. ಬೆಂಗಳೂರಿಗೆ ದಿವಂಗತ ಮಾಜಿ ಪ್ರಧಾನಿಯ ಚಿತಾಭಸ್ಮ ಆಗಮನ ಹಿನ್ನೆಲೆ ಪಕ್ಷದ ಪ್ರಮುಖರು, ಕಾರ್ಯಕರ್ತರು ಏರಪೋರ್ಟ ಹಾಗೂ ಪಕ್ಷದ ಕಚೇರಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.

ಚಿತಾಭಸ್ಮ ಬರಮಾಡಿಕೊಳ್ಳಲು ಏರ್ಪೋಟ್‌ ಗೆ ಆಗಮಿಸಿದ ಶಾಸಕ ಸಿ.ಟಿ.ರವಿ ಸೇರಿದಂತೆ ಹಾಲಿ ಹಾಗೂ ಮಾಜಿ ಶಾಸಕರು, ಪ್ರಮುಖರು ಆಗಮಿಸಿದ್ದರು.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಚಿತಾಭಸ್ಮವನ್ನು ದೆಹಲಿಯಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಂದರು. ನಂತರ ಏರ್ಪೋಟ್ ನಿಂದ ತೆರೆದ ವಾಹನದಲ್ಲಿ ರೋಡ್ ಶೋ ಮುಖಾಂತರ ಬೆಂಗಳೂರಿನ ಬಿಜೆಪಿ ಕಛೇರಿಗೆ ಚಿತಾಭಸ್ಮ ತಲುಪಿತು. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ದುಃಖವ್ಯಕ್ತಪಡಿಸಿ ಅಗಲಿದ ನಾಯಕನ ಗುಣಗಾನ ಮಾಡಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments