ಅವತಾರ ಪುರುಷನ ಅವಾಂತರ ಕೇಳಿದ್ರೆ ಶಾಕ್!

Webdunia
ಭಾನುವಾರ, 28 ನವೆಂಬರ್ 2021 (12:22 IST)
ಬೆಂಗಳೂರು : ಕೇಂದ್ರ ಸರಕಾರದ ಸರ್ವೆ ಇಲಾಖೆಯಲ್ಲಿ ಉನ್ನತ ಅಧಿಕಾರಿ ಎಂದು ನಂಬಿಸಿ ಸರಕಾರಿ ಕೆಲಸ ಕೊಡಿಸುವುದಾಗಿ 15ಕ್ಕೂ ಹೆಚ್ಚು ಜನರಿಂದ 1.3 ಕೋಟಿ ರೂ. ಪಡೆದು ವಂಚಿಸಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಬಸ್ರೂರು ಮೂಲದ ಜೆಪಿ ನಗರದ ನಿವಾಸಿ ರಾಘವ ಅಲಿಯಾಸ್ ರಾಘವೇಂದ್ರ (39) ಬಂಧಿತ. ಆರೋಪಿಯಿಂದ 1 ದ್ವಿಚಕ್ರ ವಾಹನ, ಮೊಬೈಲ್, ಟ್ಯಾಬ್ಸ್, ಲ್ಯಾಪ್ಟಾಪ್ಗಳು, ಚೆಕ್ಗಳು, ಬಾಂಡ್ ಪೇಪರ್ಗಳು, ಆತ ಖರೀದಿಸಿದ್ದ ಆಸ್ತಿಯ ದಾಖಲಾತಿಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.
ಆರೋಪಿಯ ಬಂಧನದಿಂದ ಆತನ ವಿರುದ್ಧ ಈಗಾಗಲೇ ಜೆ.ಪಿ.ನಗರ, ಯಶವಂತಪುರ, ಬನವಾಸಿ ಪೊಲೀಸ್ ಠಾಣೆ ಹಾಗೂ ಇನ್ನಿತರ ಜಿಲ್ಲೆಗಳಲ್ಲಿಯೂ ಸಹ ದಾಖಲಾಗಿರುವ ಪ್ರಕರಣ ಬೆಳಕಿಗೆ ಬಂದಿವೆ.
ಆರೋಪಿ ರಾಘವೇಂದ್ರ ಕಳೆದ ಐದಾರು ವರ್ಷಗಳಿಂದ ಬೆಂಗಳೂರಿನಲ್ಲಿದ್ದು, ಸರ್ವೆ ಇಲಾಖೆಯ ಡೆಪ್ಯುಟಿ ಕಮಿಷನರ್ ಎಂದು ನಕಲಿ ಗುರುತಿನ ಚೀಟಿ ಮಾಡಿಕೊಂಡು ತನ್ನ ಕಾರಿಗೆ ಭಾರತ ಸರಕಾರದ ಬೋರ್ಡ್ ಅಳವಡಿಸಿಕೊಂಡಿದ್ದ.
 ಸರ್ವೆ ಇಲಾಖೆ ಮತ್ತು ಇನ್ನಿತರೆ ಸರಕಾರಿ ಇಲಾಖೆಗಳಲ್ಲಿ ಕೆಲಸ ಕೊಡಿಸುವುದಾಗಿ ಒಬ್ಬೊಬ್ಬರಿಂದ ತಲಾ 8-10 ಲಕ್ಷ ರೂ. ಪಡೆದು, ಕೆಲಸವನ್ನೂ ಕೊಡದೇ ಹಣವನ್ನೂ ಹಿಂತಿರುಗಿಸದೇ ವಂಚಿಸುತ್ತಿದ್ದ. ಆರೋಪಿಯಿಂದ ವಂಚನೆಗೊಳಗಾದ ವ್ಯಕ್ತಿಯೊಬ್ಬರು ಈ ಬಗ್ಗೆ ಬನಶಂಕರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕೀಯ ನಾಯಕನಾಗಿ, ನೀವು ಸೂಕ್ಷ್ಮವಾಗಿರಲು ಸಾಧ್ಯವೇ: ರಾಘವ್ ಚಡ್ಡಾಗೆ ದೆಹಲಿ ಹೈಕೋರ್ಟ್‌

ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಗಲಾಟೆ

ತೀವ್ರ ಬಿಸಿಗಾಳಿ: ಸುಸ್ತಾದ ಬಿಹಾರದ ಜನತೆ

ದೇಶ ಮೋದಿಯನ್ನು ನಂಬಿದೆ, ರಾಹುಲ್ ಗಾಂಧಿ ಮಾತ್ರ ನಕಾರಾತ್ಮಕ ಮನಸ್ಥಿತಿಯನ್ನು ತೋರಿಸು‌ತ್ತಿದ್ದಾರೆ: ಪಿಯೂಸ್ ಗೋಯಲ್

ಧರ್ಮಸ್ಥಳ ಬುರುಡೆ ಪ್ರಕರಣ: ಸ್ವಲ್ಪ ದಿನಗಳ ಸಮಯ ಸೈಲೆಂಟ್ ಆಗಿದ್ದ ತನಿಖೆ ಮತ್ತೇ ಚುರುಕು

ಮುಂದಿನ ಸುದ್ದಿ
Show comments