Webdunia - Bharat's app for daily news and videos

Install App

ಆಕಸ್ಮಿಕ ಬೆಂಕಿಗೆ ಮಗು ಸಜೀವ ದಹನ

Webdunia
ಶನಿವಾರ, 13 ಅಕ್ಟೋಬರ್ 2018 (14:10 IST)
ಆಕಸ್ಮಿಕವಾಗಿ ಗುಡಿಸಲಿಗೆ ಬೆಂಕಿ ಬಿದ್ದ ಕಾರಣ 8 ತಿಂಗಳ ಮಗು ಸಜೀವವಾಗಿ ಸುಟ್ಟು ಕರುಕಲಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ತರಲಕಟ್ಟಿ ತಾಂಡಾದಲ್ಲಿ ಈ ಘಟನೆ ನಡೆದಿದೆ. ಗುಡಿಸಲಿನ ಜೋಳಿಗೆಯಲ್ಲಿ ಮಲಗಿದ್ದ ಎಂಟು ವರ್ಷದ ಮಹೇಶ್, ಸಜೀವವಾಗಿ ಸುಟ್ಟು ಕರುಕಲಾಗಿರುವ ದುರ್ಧೈವಿ ಮಗು. ನಿಂಗಪ್ಪಾ- ಸುನೀತಾ ದಂಪತಿಯ ಮಗು ಘಟನೆಯಲ್ಲಿ ಅಸುನೀಗಿದೆ.

ಮಗುವಿನ ತಂದೆ- ತಾಯಿ ಜೋಳಿಗೆಯಲ್ಲಿ ಮಹೇಶ್ ನನ್ನು ಮಲಗಿಸಿ ಹೊಲದಲ್ಲಿ ಕೆಲಸಕ್ಕೆಂದು ತೆರಳಿದ್ದರು. ಈ ಸಂದರ್ಭದಲ್ಲಿ ಶಾರ್ಟ್​ ಸರ್ಕ್ಯೂಟ್ ನಿಂದ ಬೆಂಕಿ‌ ತಗುಲಿದ್ದರಿಂದ, ಮನೆಯಲ್ಲಿ ಮಲಗಿದ್ದ ಮಗು ಸುಟ್ಟು ಕರಕಲಾಗಿದೆ.  

ಈ ಸಂಬಂಧ, ಬೇವೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments