Webdunia - Bharat's app for daily news and videos

Install App

ಮಕ್ಕಳಿಗೆ “ಚಿಣ್ಣರ ಧಾಮ” ನಿರ್ಮಿಸುತ್ತಿರುವ ಬೆಂಗಳೂರು ವಿಮಾನ ನಿಲ್ದಾಣ ಫೌಂಡೇಷನ್!

Webdunia
ಶುಕ್ರವಾರ, 22 ಅಕ್ಟೋಬರ್ 2021 (18:31 IST)
ಬೆಂಗಳೂರು: ಕೋವಿಡ್ ಸಂಕ್ರಮಿಕದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ಆರೈಕೆಗಾಗಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಫೆರ್ಫ್ಯಾಕ್ಸ್ ಫೈನಾನ್ಶಿಯಲ್ ಹೋಲ್ಡಿಂಗ್ಸ್ ಮತ್ತು ಸ್ಪರ್ಶ ಟ್ರಸ್ಟ್ ನಿಂದ "ಚಿಣ್ಣರ ಧಾಮ" ನಿರ್ಮಾಣ ಮಾಡಲಾಗುತ್ತಿದೆ. 
 
ಕಳೆದೆರಡು ವರ್ಷಗಳಿಂದ ಕೋವಿಡ್ -19 ದಾಳಿಯಿಂದಾಗಿ ಲಕ್ಷಾಂತರ ಮಕ್ಕಳು ಪೋಷಣೆ ಕಳೆದುಕೊಂಡಿದ್ದಾರೆ. ರಾಜ್ಯದಲ್ಲೂ ಕೂಡ ಇಬ್ಬರೂ ಸಮಸ್ಯೆ ಅಥವಾ ಒಬ್ಬ ಪೋಷಕರನ್ನು ಕಳೆದುಕೊಂಡ ಮಕ್ಕಳು ಸಂಕಷ್ಟದಲ್ಲಿದ್ದಾರೆ. ಮತ್ತೆ ಮಕ್ಕಳ ಭವಿಷ್ಯವೀಗ ಆತಂಕದಲ್ಲಿದ್ದು, ಹಣಕಾಸು ನೆರವು, ಮಾನಸಿಕ ಸ್ಥೈರ್ಯ ಈ ಮಕ್ಕಳಿಗೆ ಬೇಕಾಗಿದೆ.
 
ಈ ದೃಷ್ಟಿಯಿಂದ ರಾಜ್ಯ ವಿವಿಧ ಜಿಲ್ಲೆಗಳಿಂದ ಆಯ್ದ 300 ಹೆಣ್ಣುಮಕ್ಕಳಿಗೆ 12ನೇ ತರಗತಿವರೆಗೆ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ತರಬೇತಿಯನ್ನು ನೀಡಲು ‘ಚಿಣ್ಣರ ಧಾಮ' ಎಂಬ ಸುಸಜ್ಜಿತ ಕೇಂದ್ರವನ್ನು ನಿರ್ಮಿಸಲಾಗುತ್ತಿದೆ.  ಈ ಧಾಮದಲ್ಲಿ ವಸತಿ, ಕಲಿಕೆಗೆ ಎಲ್ಲ ರೀತಿಯ ಮೂಲಸೌಕರ್ಯಗಳನ್ನು ಕೂಡ ಅಭಿವೃದ್ಧಿಪಡಿಸಲಾಗುತ್ತಿದೆ. 
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್‌ನ (ಬಿಐಎಎಲ್) ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ವಿಭಾಗವಾದ ಕೆಐಎಎಫ್ ಈ ಧಾಮ ನಿರ್ಮಾಣದ ಜವಾಬ್ದಾರಿಯನ್ನು ಹೊತ್ತಿದೆ.  
ಕೆಐಎಫ್‌ನ ಮಹತ್ವಾಕಾಂಕ್ಷಿ ಮತ್ತು ಯಶಸ್ವಿ ಕಾರ್ಯಕ್ರಮಗಳಲ್ಲಿ ಒಂದಾದ 'ನಮ್ಮ ಶಿಕ್ಷಣ ' ಅಡಿಯಲ್ಲಿ ಚಿಣ್ಣರ ಧಾಮವನ್ನು ನಿರ್ವಹಿಸಲಾಗುತ್ತಿದೆ.
 
ಈ ಬಗ್ಗೆ ವಿವರಿಸಿರುವ ಬಿಐಎಎಲ್ ವ್ಯವಸ್ಥಾಪಕ ನಿರ್ದೇಶಕ ಹರಿ ಮರಾರ್ ಅವರು, " ಎಷ್ಟೋ ಮಕ್ಕಳ ಜೀವನ ಕೊರೊನಾ ಸಾಂಕ್ರಮಿಕದಿಂದ ಅತಂತ್ರವಾಗಿದೆ. ಅವರಿಗೆ ನೆರವಾಗುವ ದೃಷ್ಟಿಯಿಂದ ಚಿಣ್ಣರ ಧಾಮ ನಿರ್ಮಿಸುತ್ತಿದ್ದೇವೆ. 
ಬೆಂಗಳೂರು ಏರ್‌ಪೋರ್ಟ್ ಬಳಿಯ ಬೆಟ್ಟಕೋಟೆ ಎಂಬ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಏಕೈಕ ಪ್ರದೇಶದ ಚಿಣ್ಣರ ಧಾಮ ನಿರ್ಮಾಣವಾಗಲಿದೆ. ಇದರ ನಿರ್ವಹಣೆಯನ್ನು ಕಾರ್ಪೋರೇಟ್ ಮೂಲಕ, ಮಾಜಿ ಸೇನಾಧಿಕಾರಿಗಳು, ಸಮಾಜಸೇವಕರ ತಂಡವೊಂದು ವಹಿಸಿಕೊಳ್ಳಲಿದೆ. 46,000 ಚ.ಅಡಿಗಳಲ್ಲಿ ನಿರ್ಮಾಣವಾಗುತ್ತಿರುವ ಈ ಧಾಮವು ಮೊದಲ ಹಂತದ ನಿರ್ಮಾಣ ಕಾಮಗಾರಿ 2021 ರ ಅಕ್ಟೋಬರ್ ಅಂತ್ಯಕ್ಕೆ ಪೂರ್ಣಗೊಳ್ಳುತ್ತಿದೆ. ಶಿಕ್ಷಣ ಕೇಂದ್ರ, ಆರೋಗ್ಯ ಸೇವೆಗಳು, ಕೌಶಲ ಅಭಿವೃದ್ಧಿ ತರಬೇತಿಗೆ ಅಗತ್ಯ ಮೂಲಸೌಕರ್ಯವನ್ನು ಈ ಧಾಮದಲ್ಲಿ ಒದಗಿಸಲಾಗಿದೆ.
 
ವೀಕ್ಷಕ ಟ್ರಸ್ಟ್ ನಂತರ ಆಡಳಿತ ಮಂಡಳಿ ಸದಸ್ಯರಾದ ಜಿ. ರಾಘವನ್ ಮಾತನಾಡುತ್ತಾ, ತಮ್ಮ ಮಕ್ಕಳ ಜೀವನವನ್ನು ಉಜ್ವಲವಾಗಿ ರೂಪಿಸಬೇಕು ಎಂದು ಕನಸು ಕಟ್ಟಿದ ಸಂದರ್ಭದಲ್ಲಿ ಕನಸನ್ನು ನನಸು ಮಾಡಲು ನಮ್ಮ ಸಂಸ್ಥೆ ನೆರವಾಗುತ್ತಿದೆ.
ವಿಮಾನ ನಿಲ್ದಾಣ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧೂರ್‌ನಿಂದ ಪಾಕ್‌ ಗಡಿಯಲ್ಲಿ ಪ್ರತಿ ಹೆಜ್ಜೆಯಿಡುವಾಗಲೂ ಯೋಚಿಸುವಂತೆ ಮಾಡಿದೆ: ಶಶಿ ತರೂರ್‌

Karnataka Weather: ವಾರದ ಮಳೆಗೆಯೇ ಸುಸ್ತಾದ ದಕ್ಷಿಣ ಕನ್ನಡ ಜನತೆ

Dehli Rain: ವಿಮಾನ ಹಾರಾಟಗಳಲ್ಲೂ ವ್ಯತ್ಯಯ ಸಾಧ್ಯತೆ, ಪ್ರಯಾಣಿಕರಿಗೆ ಹೊಸ ಸಂದೇಶ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments