ಬಿಬಿಎಂಪಿ ಚುನಾವಣೆ ನವೆಂಬರ್ 8 ರಂದು ಕೈಗೆತ್ತಿಗೊಳ್ಳಲಿರುವ ಪಾಲಿಕೆ

Webdunia
ಭಾನುವಾರ, 7 ನವೆಂಬರ್ 2021 (19:53 IST)
ಬೆಂಗಳೂರು: ಸುಪ್ರೀಂಕೋರ್ಟ್ ಬಿಬಿಎಂಪಿ ಚುನಾವಣೆ ವಿಷಯವನ್ನು ಇದೇ ನ. 8ರಂದು ಕೈಗೆತ್ತಿಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪಾಲಿಕೆ ಚುನಾವಣೆಗೆ ಅಗತ್ಯ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗುತ್ತಿದೆ. ಬರುವ ಜ. 13ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಗೊಳ್ಳುತ್ತಿದ್ದು, ನ.8ರಂದು ಕರಡು ಮತಪಟ್ಟಿ ಪ್ರಕಟಗೊಳ್ಳಲಿದೆ. ಆದ್ದರಿಂದ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಪಾಲಿಕೆ ವಿಶೇಷ ಆಯುಕ್ತ ಕೆ.ಎ.ದಯಾನಂದ್ ಹೇಳಿದರು. 
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಸರು ದಾಖಲಿಸಲು ಅಥವಾ ಬದಲಾಯಿಸಲು ಮತ್ತು ಅದೇ ಕ್ಷೇತ್ರದ ಮತ್ತೊಂದು ವಾರ್ಡ್‌ ಗೆ ಹೆಸರು ನೋಂದಾಯಿಸಲು ಕ್ರಮ ವಹಿಸಲಾಗಿದೆ ಎಂದು ಅವರು ತಿಳಿಸಿದರು. 
ಮತದಾರರು ಪರಿಷ್ಕರಣೆ ಕಾರ್ಯದಲ್ಲಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲಿಸಿಕೊಳ್ಳಬಹುದು ಮತ್ತು  NVSP  ಪೋರ್ಟಲ್  (www.nsvp.in), (www.voterportal.eci.gov.in)  ಮತ್ತು 1950 ವೋಟರ್ ಹೆಲ್ಪ್ ಲೈನ್ ಮುಖಾಂತರ ನೋಂದಾಯಿಸಬಹುದು ಎಂದು ಹೇಳಿದರು.
ಮೊಬೈಲ್ ಆ್ಯಪ್ ಮೂಲಕ ಹೆಸರು ನೋಂದಣಿ: ಇದೇ ಪ್ರಥಮ ಬಾರಿಗೆ ಮೊಬೈಲ್ ಆ್ಯಪ್ ಮುಖಾಂತರ ಹೆಸರನ್ನು ನೋಂದಾಯಿಸುವ ಪ್ರಕ್ರಿಯೆ ಆರಂಭಿಸಲಾಗಿದೆ. ಆ್ಯಪ್ ಅನ್ನು ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದರು.
 
ನಗರ ಯೋಜನೆ ಶುಲ್ಕ ಪ್ರಾರಂಭ: ಬಿಬಿಎಂಪಿಗೆ ನಗರ ಯೋಜನೆ ಶುಲ್ಕ ವಿಚಾರ ಕೋರ್ಟ್ ಆದೇಶದಿಂದ ಗೊಂದಲ ಉಂಟಾಗಿರುವುದರಿಂದ ನಗರ ಪಾಲಿಕೆ ತೀವ್ರ ನಷ್ಟವನ್ನು ಅನುಭವಿಸುವ ಪರಿಸ್ಥಿತಿ ಬಂದೋದಗಿದೆ. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿರುವ ಬಿಬಿಎಂಪಿ ಕಡತವನ್ನು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿದ್ದು, ಸಮಾರೋಪಾದಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಒಂದೆರಡು ದಿನಗಳಲ್ಲಿ ಶುಲ್ಕ ಪಡೆಯಲು ಪ್ರಾರಂಭಿಸಲಾಗುವುದು ಎಂದು ಗೌರವ್ ಗುಪ್ತ ತಿಳಿಸಿದರು.
 
ರಸ್ತೆ, ಚರಂಡಿ ದುರಸ್ಥಿ: ಮುಖ್ಯಮಂತ್ರಿಗಳ ನಿರ್ದೇಶನದಂತೆ ರಸ್ತೆ ಮತ್ತು ಚರಂಡಿಗಳನ್ನು ದುರಸ್ಥಿ ಮಾಡುವ ಕಾರ್ಯ ಸಮಾರೋಪಾದಿಯಲ್ಲಿ ನಡೆಸಲಾಗುತ್ತಿದೆ. ವಾರ್ಡ್ ಮಟ್ಟದಲ್ಲೂ ಸಹ ಸಮಸ್ಯೆಗಳ ಚರ್ಚೆ ಆಗುತ್ತಿದೆ. ಪ್ರತಿ ವರ್ಷ 70 ರಿಂದ 80 ಕಿಲೋ ಮಿಟರ್ ಹೊಸದಾಗಿ ನಿರ್ಮಾಣ ಮಾಡುತ್ತಾ ಇದ್ದೇವೆ. ನಗರದ ಮಧ್ಯ ಭಾಗದಲ್ಲಿ ಈಗಾಗಲೇ ಪೂರ್ಣಗೊಂಡಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಆದ್ಯತೆ ಮೇರೆಗೆ ರಾಜಕಾಲುವೆ ನಿರ್ಮಾಣ ಮಾಡುತ್ತೇವೆ ಎಂದು ಗೌರವ್ ಗುಪ್ತ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರ್ನಿಂಗ್ ಕೊಡಲು ಹೋಗಿ ಮಹತ್ವದ ಸುಳಿವು ಬಿಟ್ಟುಕೊಟ್ರಾ ಡಿಕೆ ಶಿವಕುಮಾರ್‌

ಕೊಳದಲ್ಲಿ ಮೀನು ಹಿಡಿಯುತ್ತಿರುವುದನ್ನು ನೋಡಿ ರಾಹುಲ್ ಗಾಂಧಿ ಏನ್ ಮಾಡಿದ್ರು ನೋಡಿ, Video

ಆರ್‌ಎಸ್‌ಎಸ್ ಬಗ್ಗೆ ಮಾತನಾಡದಿದ್ರೆ ಟಿಕೆಟ್ ಸಿಗಲ್ಲ: ಮತ್ತೇ ಪ್ರಿಯಾಂಕ್ ಖರ್ಗೆ ಕಿಡಿ

ವಿಷಗಾಳಿಯಿಂದ ರಾಷ್ಟ್ರ ರಾಜಧಾನಿ ಜನರನ್ನು ರಕ್ಷಿಸಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಆಗ್ರಹ

ಬೆಂಗಳೂರು ರಕ್ಷಿಸಿ, ಟನಲ್ ರೋಡ್ ನಿಲ್ಲಿಸಿ ಘೋಷಣೆಯಡಿ ಸಹಿಸಂಗ್ರಹ ಆರಂಭಿಸಿದ ಬಿಜೆಪಿ

ಮುಂದಿನ ಸುದ್ದಿ
Show comments