Select Your Language

Notifications

webdunia
webdunia
webdunia
webdunia

ವೀರಮರಣವನ್ನೊಪ್ಪಿದ 5 ಜನ ಯೋಧರ ಕುಟುಂಬಕ್ಕೆ ನಿವೇಶನ ಹಂಚಿಕೆ ಮಾಡಿದ ಬಿ.ಡಿ.ಎ

ವೀರಮರಣವನ್ನೊಪ್ಪಿದ 5 ಜನ ಯೋಧರ ಕುಟುಂಬಕ್ಕೆ ನಿವೇಶನ ಹಂಚಿಕೆ ಮಾಡಿದ ಬಿ.ಡಿ.ಎ
bangalore , ಮಂಗಳವಾರ, 28 ಸೆಪ್ಟಂಬರ್ 2021 (20:09 IST)
ಬೆಂಗಳೂರು: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಶಿಫಾರಸ್ಸಿನಂತೆ ಗಡಿ ಕಾಯುವ  ಯೋಧರು ವೀರಮರಣ ಹೊಂದಿದಲ್ಲಿ ಅಥವಾ ತೀವ್ರ ತೆರವಾಗಿ ಗಾಯಗೊಂಡ ಯೋಧರ ಕುಟುಂಬಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಉಚಿತ ನಿವೇಶನ ನೀಡಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಹಿಂದೆ ಇಬ್ಬರು ವೀರ ಯೋಧರ  ಕುಟುಂಬಗಳಿಗೆ ಸಾಂಕೇತಿಕವಾಗಿ ನಿವೇಶನ ಹಂಚಿಕೆ ಮಾಡಿದ್ದರು.
 
ನಗರದ  5 ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡಲು ನಿರ್ಧರಿಸಲಾಗಿತ್ತು ಈ ಹಿನ್ನಲೆಯಲ್ಲಿ  ಮಂಗಳವಾರ ಯೋಧರಾದ ಲಾನ್ಸ್ ನಾಯಕ್ ಕೆ.ಎಮ್ ನಾಗೇಂದ್ರಕುಮಾರ್ ರ ತಾಯಿ ಸರೋಜಮ್ಮ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಆಯುಕ್ತ ರಾಜೇಶ್ ಗೌಡ ಹಾಗೂ ಕಾರ್ಯದರ್ಶಿ ಆನಂದ ಹಕ್ಕು ಪತ್ರ ವಿತರಿಸಿದರು.
 
ಇನ್ನುಳಿದ ಎರಡು ಕುಟುಂಬಗಳಿಗೆ ನೊಂದಾಯಿತ ಅಂಚೆಯ ಮೂಲಕ ಹಕ್ಕುಪತ್ರಗಳನ್ನು ತಲುಪಿಸಲಾಗುವುದು ಎಂದು ಆಯುಕ್ತರು ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಚಲಿಸುತ್ತಿದ್ದ ಕಾರಿನಲ್ಲಿ ಹೊತ್ತಿ ಉರಿದ ಬೆಂಕಿ