ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

Sampriya
ಮಂಗಳವಾರ, 21 ಅಕ್ಟೋಬರ್ 2025 (18:35 IST)
ಚಿಕ್ಕಬಳ್ಳಾಪುರು: ರಾಜ್ಯ ಸರ್ಕಾರ ನಡೆಯಿಂದ ಯಾರೂ ಸಂತೋಷವಾಗಿಲ್ಲ. ರಾಜ್ಯದಲ್ಲಿ ಹೊಸ ಕಂಪೆನಿಗಳು ಬರೋದು ಇರಲಿ, ಇಲ್ಲಿರುವ ಕಂಪೆನಿಗಳನ್ನು ಹೇಗೆ ಉಳಿಸಿಕೊಳ್ಳುವುದು ದೊಡ್ಡ ವಿಷಯವಾಗಿದೆ ಎಂದು ಸಂಸದ ಡಾ.ಕೆ.ಸುಧಾಕರ್ ಅವರು ಕಿಡಿಕಾರಿದರು.

ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರ ಬಳಿ, ಬೆಂಗಳೂರಿನ ರಸ್ತೆ ಗುಂಡಿ ವಿಚಾರವಾಗಿ ರಾಜ್ಯ ಸರ್ಕಾರದ ನಡೆ ಬಗ್ಗೆ ಪ್ರತಿಕ್ರಿಯಿಸಿದರು. 

ರಾಜ್ಯ ಸರ್ಕಾರದ ನಡೆಯಿಂದ ಯಾರೂ ಸಂತೋಷವಾಗಿಲ್ಲ. ಬಂದಿರುವ ಉದ್ದಿಮೆದಾರರನ್ನೇ ಕಾಂಗ್ರೆಸ್ ಸರ್ಕಾರ ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ.  ಎಸ್‌ಎಂ ಕೃಷ್ಣ ಅವರ ದೂರದೃಷ್ಟಿಯಿಂದ ರಾಜ್ಯದಲ್ಲಿ ಐಟಿ ಇಷ್ಟರ ಮಟ್ಟಿಗೆ ಬೆಳೆದಿದೆ ಬಿಟ್ರೆ ಇಂತಹ ಪುಣ್ಯಾತ್ಮರು ಅವತ್ತು ಇದ್ದಿದ್ರೆ ಕರ್ನಾಟಕ, ಇನ್ನೊಂದು ಬಿಹಾರ ಇಲ್ಲದಿದ್ರೆ ಉತ್ತರ ಪ್ರದೇಶವಾಗಿರುವುದು ಎಂದರು. 

ದೂರದೃಷ್ಟಿಯ ಎಸ್‌ಎಂ ಕೃಷ್ಣ ಹಾಗೂ ದೇವೇಗೌಡ ಅವರು ಅವತ್ತು ಮುಖ್ಯಮಂತ್ರಿಯಾಗಿದ್ದರಿಂದ ನಮ್ಮ ರಾಜ್ಯ ಬಚಾವ್ ಆಗಿದೆ. ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯನ್ನು ಗಳಿಸಿದ ಉದ್ದಿಮೇದಾರರು, ಕಂಪೆನಿಗಳು ಬೆಂಗಳೂರಿನ ರಸ್ತೆ ಸರಿಯಿಲ್ಲ ಎಂದು ಹೇಳುತ್ತಿದ್ದಾರೆ. ದೂರು ಹೇಳುವವರಿಗೆ ರಾಜ್ಯದ ಕಾಂಗ್ರೆಸ್ ಸರ್ಕಾರ ನಿಮ್ಮ ಸಿಆರ್‌ಎಸ್ ಫಂಡ್‌ನಿಂದ ಹಣ ತಂದು ಸರಿ ಮಾಡಿ ಎಂದು ಹೇಳುವ ಸ್ಥಿತಿಗೆ ರಾಜ್ಯ ಸರ್ಕಾರ ಬಮದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments