Select Your Language

Notifications

webdunia
webdunia
webdunia
webdunia

ಅನಾಥ ಮಕ್ಕಳ ಆಶ್ರಮದಲ್ಲಿ ಇನ್ಮುಂದೆ ಅದ್ಧೂರಿ ಹುಟ್ಟುಹಬ್ಬ ಆಚರಿಸುವಂತಿಲ್ಲ

ಅನಾಥ ಮಕ್ಕಳ ಆಶ್ರಮದಲ್ಲಿ ಇನ್ಮುಂದೆ ಅದ್ಧೂರಿ ಹುಟ್ಟುಹಬ್ಬ ಆಚರಿಸುವಂತಿಲ್ಲ
bangalore , ಮಂಗಳವಾರ, 19 ಅಕ್ಟೋಬರ್ 2021 (21:21 IST)
ಅನಾಥ ಮಕ್ಕಳ ಆಶ್ರಮಗಳಲ್ಲಿ ಅದ್ಧೂರಿಯಾಗಿ ಹುಟ್ಟುಹಬ್ಬ ಸಂಭ್ರಮಿಸಿಕೊಳ್ಳುವುದಕ್ಕೆ ಮಕ್ಕಳ ರಕ್ಷಣಾ ನಿರ್ದೇಶನಾಲಯ ಬ್ರೇಕ್ ಹಾಕಿದೆ.ಇತ್ತೀಚೆಗೆ ರಾಜಕಾರಣಿಗಳು, ಸೆಲೆಬ್ರಿಟಿಗಳು, ಶ್ರೀಮಂತರು ಎಲ್ಲರೂ ತಮ್ಮ ಹಾಗೂ ತಮ್ಮವರ ಹುಟ್ಟುಹಬ್ಬವನ್ನು ಅನಾಥ ಮಕ್ಕಳ ಆಶ್ರಮದಲ್ಲಿ ಆಚರಿಸುತ್ತಿದ್ದಾರೆ. ಆದರೆ ಇನ್ಮುಂದೆ ಈ ರೀತಿ ಮಾಡುವಂತಿಲ್ಲ. ಇನ್ಮುಂದೆ ಇಂತಹ ಆಚರಣೆ ಕಂಡುಬಂದರೆ ಅದನ್ನು ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸಲಾಗುವುದು.ಬೇರೆಯವರು ಬಂದು ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿ ಹೋಗುವುದರಿಂದ ಅನಾಥ ಮಕ್ಕಳಿಗೆ ಅಸಮಾನತೆ ಕಾಡುತ್ತದೆ. ತಾವು ಕೀಳು, ತಮಗೆ ಯಾರೂ ಇಲ್ಲ ಎನ್ನುವ ಭಾವನೆ ಬೆಳೆಯುತ್ತದೆ. ಈ ತಾರತಮ್ಯ ಭಾವನೆಯಿಂದ ಖಿನ್ನತೆ ಕಾಡಬಹುದು. ಈ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿ ಈ ನಿರ್ಧಾರಕ್ಕೆ ಬರಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಂಗಳೂರಿನ ಖ್ಯಾತ ವಕೀಲನಿಂದ ಇಂಟರ್ ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ