Webdunia - Bharat's app for daily news and videos

Install App

ಸರಕಾರದ ವಿರುದ್ಧ ವೈದ್ಯರನ್ನು ಎತ್ತಿಕಟ್ಟಿದ್ದೇ ಬಿಜೆಪಿಯವರು: ಸಿಎಂ ಕಿಡಿ

Webdunia
ಗುರುವಾರ, 16 ನವೆಂಬರ್ 2017 (14:48 IST)
ಸರಕಾರದ ವಿರುದ್ಧ ವೈದ್ಯರನ್ನು ಎತ್ತಿಕಟ್ಟಿದ್ದೇ ಬಿಜೆಪಿಯವರು. ಇಲ್ಲವಾದಲ್ಲಿ ವೈದ್ಯರು ಪ್ರತಿಭಟನೆಯನ್ನೇ ಮಾಡುತ್ತಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಕೆಂಡಾಮಂಡಲವಾಗಿದ್ದಾರೆ.
 
ವಿಧಾನಪರಿಷತ್‌ನಲ್ಲಿ ಮಾತನಾಡಿದ ಅವರು, ನಾನು ಖಾಸಗಿ ವೈದ್ಯರೊಂದಿಗೆ ಚರ್ಚೆ ನಡೆಸಿದ್ದೇನೆ. ವಿಧೇಯಕ ಮಂಡನೆಯ ಮೊದಲೇ ವೈದ್ಯರು ಪ್ರತಿಭಟನೆ ನಡೆಸಲು ಬಿಜೆಪಿಯವರು ಕಾರಣವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಖಾಸಗಿ ವೈದ್ಯರು ಸರಕಾರದೊಂದಿಗೆ ಚರ್ಚೆ ನಡೆಸಿದ ನಂತರ ಪ್ರತಿಭಟನೆಯನ್ನು ಹಿಂಪಡೆಯಲು ತೀರ್ಮಾನಿಸಿದ್ದರು. ಆದರೆ, ಬಿಜೆಪಿ ನಾಯಕರು ಪರೋಕ್ಷವಾಗಿ ಅವರಿಗೆ ನೀಡಿದ ಪ್ರೇರಣೆಯಿಂದಾಗಿ ವೈದ್ಯರು ದಾರಿ ತಪ್ಪಿದ್ದಾರೆ ಎಂದರು.
 
ವೈದ್ಯರೊಂದಿಗೆ ಸಮಾಲೋಚಿಸಲು ಸರಕಾರ ಬದ್ಧವಾಗಿದೆ. ಸರಕಾರದ ಸಂಧಾನ ಸೂತ್ರ ಸಿದ್ದವಾಗಿದೆ. ಇಂದು ಸಂಜೆ ನಡೆಯಲಿರುವ ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments