Webdunia - Bharat's app for daily news and videos

Install App

ಸಚಿವರ ಎದುರಲ್ಲೇ ಬಡಿದಾಡಿಕೊಂಡ ಬಿಜೆಪಿ

geetha
ಬುಧವಾರ, 24 ಜನವರಿ 2024 (18:22 IST)
ತುಮಕೂರು :ಕೇಂದ್ರ ಹಾಗು ರಾಜ್ಯ ಸರ್ಕಾರವು ಜಂಟಿಯಾಗಿ ಉಂಡೆ ಕೊಬ್ಬರಿ ಖರೀದಿ ಕೇಂದ್ರ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ವೇಳೆ ಕೆಲವು ಬಿಜೆಪಿ ಕಾರ್ಯಕರ್ತರು  ಬಿಜೆಪಿ ಬಾವುಟವನ್ನು ಧರಿಸಿಕೊಂಡು ಬಂದಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಬಾವುಟದೊಂದಿಗೆ ಆಗಮಿಸುವುದನ್ನು ವಿರೋಧಿಸಿದರು. ಇದಕ್ಕೆ ಕೆರೆಳಿದ ಬಿಜೆಪಿ ಕಾರ್ಯಕರ್ತರು ಬೇಕಿದ್ದರೆ ನೀವೂ ಕೂಡ ಹಾಕಿಕೊಂಡು ಬನ್ನಿ ಎಂದು ಕೈ ಕಾರ್ಯಕರ್ತರ ಕಾಲೆಳೆದರು. ಇಲ್ಲಿಂದ ಮಾತಿನ ಚಕಮಕಿ ತೀವ್ರ ಹಂತಕ್ಕೆ ತಲುಪಿತು. 

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಗೃಹಸಚಿವ ಪರಮೇಶ್ವರ್‌ ಎದುರಿನಲ್ಲೇ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರು ಕೈಕೈ ಮಿಲಾಯಿಸಿಕೊಂಡಿರುವ ಘಟನೆ ಬುಧವಾರ ತುಮಕೂರಿನಲ್ಲಿ ನಡೆದಿದೆ.  ಸಚಿವ ಶಿವಾನಂದ್‌ ಪಾಟೀಲ್‌ ಕೂಡ ಈ ಘಟನೆಗೆ ಮೂಕಪ್ರೇಕ್ಷಕರಾಗಿದ್ದಾರೆ. 

ಗೃಹಸಚಿವ ಜಿ. ಪರಮೇಶ್ವರ್‌ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  ಮತ್ತು ಶಿವಾನಂದ ಪಾಟೀಲರ ಮನವಿಗೂ ಎರಡೂ ಬದಿಯ ಕಾರ್ಯಕರ್ತರು ಕಿವಿಗೊಡಲಿಲ್ಲ. ಕೊನೆಗೆ ಸ್ಥಳದಲ್ಲಿದ್ದ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments