Webdunia - Bharat's app for daily news and videos

Install App

ರಮ್ಯಾಗೆ ಬಾಗಿನ ರವಾನಿಸಿ ಟಾಂಗ್ ನೀಡಿದ ಬಿಜೆಪಿ

Webdunia
ಬುಧವಾರ, 12 ಸೆಪ್ಟಂಬರ್ 2018 (14:07 IST)
ಮಂಡ್ಯ ಜಿಲ್ಲೆಗೆ ಆಗಮಿಸದ ನಟಿ ಹಾಗೂ ಮಾಜಿ ಸಂಸದೆ ರಮ್ಯಾಗೆ ಬಿಜೆಪಿ ಕಾರ್ಯಕರ್ತರು ವಿಭಿನ್ನವಾಗಿ ಟಾಂಗ್ ನೀಡಿದ್ದಾರೆ.

ಬಿಜೆಪಿ ಕಾರ್ಯಕರ್ತರಿಂದ ತವರು ಮರೆತ ತಂಗಿಗೆ ಬಾಗಿನ ರವಾನೆ ಮಾಡಲಾಗಿದೆ. ಹೂ, ಬಳೆ ಹಾಗೂ ತೆಂಗಿನ ಕಾಯಿ ಒಳಗೊಂಡ ಬಾಗಿನ ರವಾನೆ ಮಾಡಲಾಗಿದೆ. ಮಾಜಿ ಸಂಸದೆ ಹಾಗೂ ಸ್ಯಾಂಡಲ್ ವುಡ್ ಕ್ವೀನ್ ನೆ ಬಾಗಿನವನ್ನು ಪೋಸ್ಟ್ ಆಫೀಸ್ ನಲ್ಲಿ ಪಾರ್ಸಲ್ ಕಳಿಸುವ ಮೂಲಕ ವ್ಯಂಗ್ಯ ಮಾಡಲಾಗಿದೆ.

ಸಹೋದರಿ ರಮ್ಯಾ ತವರು ಮರೆತಿದ್ದು, ಅವರಿಗೆ ತವರು ಮಂಡ್ಯ ನೆನಪಾಗಲಿ ಅಂತಾ ಬಾಗಿನ ರವಾನೆ ಮಾಡಲಾಗಿದೆ.
ಮಂಡ್ಯ ಬಿಜೆಪಿ ಕಾರ್ಯಕರ್ತರಿಂದ ಸಹೋದರಿಗೆ ಪ್ರೀತಿಯ ತವರಿನ ಉಡುಗೊರೆ ಇದು ಎಂದು ಬಿಜೆಪಿ ಕಾರ್ಯಕರ್ತರು ಲೇವಡಿ ಮಾಡಿದ್ದಾರೆ. ಕಳೆದ ವಿಧಾನ ಸಭೆ ಹಾಗೂ ನಗರಸಭೆ ಚುನಾವಣೆಗೂ ಮತ ಚಲಾಯಿಸದ ರಮ್ಯಾ ವಿರುದ್ಧ ಜನರಲ್ಲಿ ಆಕ್ರೋಶ ಹೆಚ್ಚುತ್ತಿದೆ.

ಗೌರಿ ಗಣೇಶನ ಹಬ್ಬಕ್ಕಾದರೂ ಮಂಡ್ಯಕ್ಕೆ ಆಗಮಿಸಿ ಎಂದು  ಬಿಜೆಪಿ ಕಾರ್ಯಕರ್ತರು ಮನವಿ ಮಾಡಿಕೊಂಡಿದ್ದಾರೆ.
ಇನ್ನಾದ್ರೂ ತವರಿಗೆ ಆಗಮಿಸಿ ತವರಿನ ಜನರ ಕಷ್ಟಕ್ಕೆ ಸ್ಪಂದಿಸಬೇಕು. ಕಳೆದ ಎರಡು ವರ್ಷದಿಂದ ಮಂಡ್ಯದಿಂದ ಕಣ್ಮರೆಯಾಗಿರೋ ರಮ್ಯಾ ಈಗಲಾದ್ರೂ ಮಂಡ್ಯಕ್ಕೆ ಆಗಮಿಸದಿದ್ರೆ ಮುಂದಿನ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಆಗಮಿಸಿದ್ರೆ ಘೇರಾವ್ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments