Publish Date: Tue, 12 Nov 2019 (10:58 IST)
Updated Date: Tue, 12 Nov 2019 (11:02 IST)
ವಿಜಯಪುರ: ಬಿಜೆಪಿಗೆ ನೀತಿ ನಿಯಮ ಇಲ್ಲ. ಪಕ್ಷಾಂತರ ಅವರ ಕೆಲಸ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಆರೋಪಿಸಿದ್ದಾರೆ.
ವಿಜಯಪುರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನ ಈಗಾಗಲೇ ಬಿಜೆಪಿಯ ವಿರುದ್ಧ ತಿರುಗಿ ಬಿದ್ದಿದ್ದಾರೆ. ಅನರ್ಹ ಶಾಸಕರಿಗೆ ಬಿಜೆಪಿ ನೀಡಿದ ಭರವಸೆ ಈಡೇರಿಸಿಲ್ಲ. ಮೂರು ದಿನಗಳಲ್ಲಿ ಸಚಿವರನ್ನಾಗಿ ಮಾಡುವುದಾಗಿ ಹೇಳಿ ಈಗ ಅವರಿಗೆ ಅತಂತ್ರ ಸ್ಥಿತಿಯನ್ನು ತಂದಿಟ್ಟಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಮಹಾರಾಷ್ಟ್ರದಲ್ಲಿ ಶಿವಸೇನೆ ಜತೆ ಕಾಂಗ್ರೆಸ್ ಕೈಜೋಡಿಸುವ ವಿಚಾರ ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಬಿಜೆಪಿ ಸರ್ವಾಧಿಕಾರಿ ಧೋರಣೆಯಿಂದ ಮೈತ್ರಿ ಕಟ್ಟಾಗಿದೆ. ಶಿವಸೇನೆ ಪಕ್ಷ ಮೈತ್ರಿಯನ್ನು ಮುರಿದುಕೊಂಡಿದೆ ಎಂದು ಅವರು ತಿಳಿಸಿದ್ದಾರೆ.