Select Your Language

Notifications

webdunia
webdunia
webdunia
webdunia

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಭೂ ಹಗರಣದ ದಾಖಲೆ ಬಿಡುಗಡೆಗೊಳಿಸಿದ ಬಿಜೆಪಿ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಭೂ ಹಗರಣದ ದಾಖಲೆ ಬಿಡುಗಡೆಗೊಳಿಸಿದ ಬಿಜೆಪಿ
ಬೆಂಗಳೂರು , ಬುಧವಾರ, 3 ಜನವರಿ 2018 (14:15 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭೂ ಹಗರಣವೊಂದು ಸುತ್ತಿಕೊಂಡಿದೆ. ಸಿದ್ದರಾಮಯ್ಯ ವಿರುದ್ಧ ಭೂ ಹಗರಣದ ಆರೋಪ ಮಾಡಿರುವ ಬಿಜೆಪಿ ದಾಖಲೆಯನ್ನೂ ಬಿಡುಗಡೆ ಮಾಡಿದೆ. 
 
2014 ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಯನಗರದ ಸಿದ್ದಾಪುರ ಬಡಾವಣೆಯಲ್ಲಿ  200 ಕೋಟಿ ರೂಪಾಯಿ ಮೌಲ್ಯದ2 ಎಕರೆ 39 ಗುಂಟೆ ಜಮೀನನ್ನು ಅಶೋಕ್‌ ಧಾರಿವಾಲಾ  ಕಂಪೆನಿಗೆ ಡಿನೋಟಿಫೈ ಮಾಡಿ ನೀಡಿದ್ದಾರೆ ಎಂದು ಆರೋಪಿಸಿ ಸಿದ್ದರಾಮಯ್ಯ ನಡೆಸಿರುವ ಭೂ ಹಗರಣದ ಕುರಿತ ದಾಖಲೆಗಳನ್ನು ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಬಿಡುಗಡೆ ಮಾಡಿದ್ದಾರೆ.
 
2014 ರಲ್ಲಿ ಜಗದೀಶ್‌ ಶೆಟ್ಟರ್‌ ಅವರ ನೇತೃತ್ವದ ಬಿಜೆಪಿ ಸರ್ಕಾರ ಡಿನೋಟಿಫೈ ಮಾಡಲು ಒಪ್ಪಿರಲಿಲ್ಲ. ಆದರೆ ಸಿದ್ದರಾಮಯ್ಯ ಅವರು ಡಿನೋಟಿಫೈ ಮಾಡಿ ಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸ್ವಚ್ಛ, ಪ್ರಾಮಾಣಿಕ ಆಡಳಿತ ನೀಡುತ್ತೇನೆಂದು ರಕ್ತದಲ್ಲಿ ಬರೆದುಕೊಡುವೆ– ಬಿಎಸ್‌ವೈ