Select Your Language

Notifications

webdunia
webdunia
webdunia
webdunia

ಜನಾರ್ದನ ರೆಡ್ಡಿಯಿಂದ ದೂರವಿರುವಂತೆ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರಿಗೆ ಸೂಚನೆ

ಜನಾರ್ದನ ರೆಡ್ಡಿಯಿಂದ ದೂರವಿರುವಂತೆ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರಿಗೆ ಸೂಚನೆ
ಬೆಂಗಳೂರು , ಬುಧವಾರ, 7 ನವೆಂಬರ್ 2018 (12:58 IST)
ಬೆಂಗಳೂರು : ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಹಗರಣವೊಂದರಲ್ಲಿ ಸಿಲುಕಿಕೊಂಡಿರುವ ಹಿನ್ನಲೆಯಲ್ಲಿ ಇದೀಗ ಜನಾರ್ದನ ರೆಡ್ಡಿ ಜೊತೆ ಅಂತರ ಕಾಯ್ದುಕೊಳ್ಳುವಂತೆ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರಿಗೆ ಸೂಚನೆ ನೀಡಿದೆ ಎನ್ನಲಾಗಿದೆ.


‘ರೆಡ್ಡಿ ಮತ್ತೆ ಎಡವಟ್ಟು ಮಾಡಿಕೊಂಡಿದ್ದಾರೆ. ಉಪ ಚುನಾವಣೆಯಲ್ಲಿ ಕೂಡ ಸುಮ್ಮನಿರಲಾಗದೆ ಸಿದ್ದರಾಮಯ್ಯ ಪುತ್ರನ ಸಾವಿನ ಬಗ್ಗೆ ಮಾತನಾಡಿ ಪಕ್ಷಕ್ಕೆ ಮುಜುಗರ ಸೃಷ್ಟಿಸಿದ್ದರು. ಈಗ ಮತ್ತೊಂದು ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ ಹಾಗಾಗಿ ಅಂತರ ಕಾಯ್ದುಕೊಳ್ಳಿ’ ಎಂದು ರಾಜ್ಯ ನಾಯಕರಿಗೆ ಬಿಜೆಪಿ ಹೈಕಮಾಂಡ್ ಈ ಖಡಕ್ ಸೂಚನೆ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಬಳ್ಳಾರಿಯಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದೆ. ಸಾರ್ವತ್ರಿಕ ಚುನಾವಣೆಯಲ್ಲಿ ಇದು ಇನ್ನಷ್ಟು ಸಂಕಷ್ಟ ತಂದೊಡ್ಡುತ್ತದೆ. ಹೀಗಾಗಿ ಜನಾರ್ದನ ರೆಡ್ಡಿ ಸಂಪರ್ಕ ಮಾಡಬೇಡಿ. ಯಾರೂ ಈ ವಿಚಾರ ಮಾತನಾಡಬೇಡಿ. ಅನಗತ್ಯವಾಗಿ ಈ ವಿಚಾರದ ಬಗ್ಗೆ ಮಾತನಾಡಿ ಗೊಂದಲ ಸೃಷ್ಟಿಸಬೇಡಿ ಎಂದು ಹೈಕಮಾಂಡ್ ರಾಜ್ಯ ಬಿಜೆಪಿ  ನಾಯಕರಿಗೆ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಜನಾರ್ಧನ ರೆಡ್ಡಿ ತಲೆಮರೆಸಿಕೊಂಡಿರುವ ಬಗ್ಗೆ ಶ್ರೀರಾಮುಲು ಹೇಳಿದ್ದೇನು?