Webdunia - Bharat's app for daily news and videos

Install App

ಬಿಜೆಪಿಯವರು ಆಪರೇಷನ್ ಜಪ ಮಾಡ್ತಿದ್ದಾರಂತೆ!

Webdunia
ಸೋಮವಾರ, 11 ಫೆಬ್ರವರಿ 2019 (14:15 IST)
ಬಿಜೆಪಿಯವರು ರಾಜ್ಯದ ಬರಗಾಲದ ಚಿಂತನೆ ಬಿಟ್ಟು‌ ಆಪರೇಷನ್ ಕಮಲದ ಬಗ್ಗೆ ಜಪ  ಮಾಡುತ್ತಿದ್ದಾರೆ ಎಂದು ಸಚಿವರೊಬ್ಬರು ಗುಡುಗಿದ್ದಾರೆ.

ಈ ಮೊದಲು ಆಡಿಯೋ ಮಿಮಿಕ್ರಿ ಅಂದವರು ಈಗ ಏಕೆ ಒಪ್ಪಿಕೊಂಡಿದ್ದಾರೆ ಎಂದು ಪ್ರಶ್ನೆ ಮಾಡಿದ ಸಚಿವರು,  ಮೊದಲು ಆಪರೇಷನ್ ಕಮಲದ ಬಗ್ಗೆ ಮಾತಾಡಿದ್ದ ಆಡಿಯೋ ನನ್ನದಲ್ಲ ಎಂದಿದ್ದ ಬಿಎಸ್ವೈ ಈಗ ಒಪ್ಪಿಕೊಂಡಿದ್ದೇಕೆ?  ಯಾರು ಯಾರನ್ನೇ ಕಳಿಸಲಿ ಯಡಿಯೂರಪ್ಪ ಹಾಗೆ ಮಾತನಾಡಿದ್ದು ತಪ್ಪಲ್ಲವೇ? ಎಂದು  ಶಾಸಕರ‌ ಖರೀದಿ ಕುರಿತು ಮಾತನಾಡಿದ್ದ ಆಡಿಯೋ ಬಗ್ಗೆ ಸಚಿವ ಹೆಚ್.ಡಿ ರೇವಣ್ಣ ಪ್ರಶ್ನೆ ಮಾಡಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ದೋಸ್ತಿ ಸರಕಾರದ ವಿರುದ್ಧ ಕೇಳಿಬರುತ್ತಿರುವ ಟೀಕೆ‌, ಆರೋಪಗಳಿಗೆ ಪ್ರತಿಕ್ರಿಯೆ ನೀಡಲ್ಲ. ಅವರಿಗೆ ನಾ ರಿಯಾಕ್ಟ್ ಮಾಡಿದ್ರೆ ಪೊಳ್ಳೆದ್ದು ಹೋಗ್ತೀನಿ ಎಂದರು.
ಬಿಜೆಪಿಯವರ  ಬಗ್ಗೆ ನಾಡಿನ ಜನರಿಗೆ ಬಿಡ್ತೇನೆ, ಅವರನ್ನು ನೆಗ್ಲೆಕ್ಟ್ ಮಾಡ್ತೇನೆ ಎಂದು  ಹಾಸನದಲ್ಲಿ ಲೋಕೋ ಪಯೋಗಿ ಸಚಿವ ಎಚ್.ಡಿ.ರೇವಣ್ಣ‌ ಕಿಡಿಕಾರಿದರು.

ನಮ್ಮ ಸರ್ಕಾರಕ್ಕೆ  ಏನೂ ಆಗಲ್ಲ‌. ಸರ್ಕಾರ ಸುಭದ್ರವಾಗಿದೆ. ರಾಜ್ಯದ 156 ತಾಲ್ಲೂಕಿನಲ್ಲಿ ಬರಗಾಲ‌ ಇದೆ. ನಾವು ಮೂರು ಸಾವಿರ ಕೋಟಿ ನೆರವು ಕೇಳಿದ್ದೆವು. ನಮಗೆ 900 ಕೋಟಿ, ಪಕ್ಕದ ಮಹಾರಾಷ್ಟ್ರ ಕ್ಕೆ 4 ಸಾವಿರ ಕೋಟಿ ಕೊಡ್ತಾರೆ. ಬಿಜೆಪಿ ನಾಯಕರು ರಾಜ್ಯದಲ್ಲಿ ಯಾವ ನೈತಿಕತೆಯಿಂದ ಮತ ಕೇಳುತ್ತಾರೆ?  ಐದು ವರ್ಷ ರಾಜ್ಯಕ್ಕೆ 
ಕೇಂದ್ರದ ಕೊಡುಗೆ ಏನು? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments