ಎ.ಕೃಷ್ಣಪ್ಪರನ್ನು ಜೆಡಿಎಸ್ ನವರೇ ಕೊಂದ್ರು ಎಂದ ಬಿಜೆಪಿ ಮುಖಂಡ

Webdunia
ಮಂಗಳವಾರ, 19 ಮಾರ್ಚ್ 2019 (14:00 IST)
ಕಳೆದ ಲೋಕಸಭಾ ಚುನಾವಣೆಯ ಜೆ.ಡಿ.ಎಸ್ ಅಭ್ಯರ್ಥಿ ಎ.ಕೃಷ್ಣಪ್ಪರನ್ನು ಜನತಾ ದಳದ ಮುಖಂಡರೇ ಅನ್ಯಾಯ ವಾಗಿ ಕೊಂದಿದ್ದಾರೆ ಅಂತ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಗಂಭೀರ ಆರೋಪ ಮಾಡಿದ್ದಾರೆ.

ಅಂದು ಜೆ.ಡಿ.ಎಸ್.ರಾಜ್ಯಾಧ್ಯಕ್ಷರೂ ಆದ ಎ.ಕೃಷ್ಣಪ್ಪರನ್ನ ಗೆಲ್ಲಿಸ್ತೇವೆ ಅಂತಾ ತುಮಕೂರಿಗೆ ಕರೆದುಕೊಂಡು ಬಂದು ಅವರ ಸಾವಿಗೆ ಕಾರಣರಾಗಿದ್ದಾರೆ. ಜಾತಿ ಪ್ರೇಮ ಮೆರೆದ ಜೆ.ಡಿ.ಎಸ್ ನ ಒಕ್ಕಲಿಗ ಮುಖಂಡರು ಅಂದು ಲಕ್ಕಪ್ಪ, ಇಂದು ಮುದ್ದಹನುಮೇಗೌಡ ಎಂದು ಕರಪತ್ರ ಹಂಚಿ ಕಾಂಗ್ರೆಸ್ ನ ಮುದ್ದಹನುಮೇಗೌಡರ ಪರ ಮತಯಾಚನೆ ಮಾಡಿದ್ರು. ಈ ಮುಖೇನ ಯಾದವ ಸಮುದಾಯದ ಮುಖಂಡ ಎ.ಕೃಷ್ಣಪ್ಪರನ್ನ ಬಲಿತೆಗೆದುಕೊಂಡರು ಎಂದು ಜಿ.ಎಸ್.ಬಸವರಾಜು ಆಪಾದಿಸಿದ್ದಾರೆ.

ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಜಿ.ಎಸ್.ಬಸವರಾಜು ಜೆ.ಡಿ.ಎಸ್ ವಿರುದ್ಧ  ಹರಿಹಾಯ್ದಿದ್ದಾರೆ. ಕಳೆದ ಲೋಕಸಭಾ ಚುನಾವಣೆಯ ಜೆ.ಡಿ.ಎಸ್ ಅಭ್ಯರ್ಥಿ ಎ.ಕೃಷ್ಣಪ್ಪರನ್ನು ಜನತಾ ದಳದ ಮುಖಂಡರೇ ಅನ್ಯಾಯವಾಗಿ ಕೊಂದಿದ್ದಾರೆ ಎಂದು ಜಿ.ಎಸ್.ಬಸವರಾಜು ಗಂಭೀರ ಆರೋಪ ಮಾಡಿದ್ದಾರೆ. ಮತದಾನದ ದಿನವೇ ಎ.ಕೃಷ್ಣಪ್ಪ ನನ್ನ ಮನೆಗೆ ಬಂದಿದ್ರು. ಪಕ್ಷದ ಯಾವ ಶಾಸಕನೂ ನನ್ನ ಪರ ಕೆಲಸ ಮಾಡಿಲ್ಲ. ನನ್ನ ಇಲ್ಲಿಗೆ ತಂದು ಪರದೇಶಿ ಮಾಡಿದ್ರು ಎಂದು ಕಣ್ಣೀರು ಹಾಕಿದ್ರು. ನಾನು ಸಂತೈಸಿಸಿ ಕಳುಹಿಸಿದ್ದೆ. ಈ ಕೊರಗಿನಲ್ಲೇ ಇದ್ದ ಕೃಷ್ಣಪ್ಪ ಮತದಾನ ನಡೆದ  ಎರಡೇ ದಿನದಲ್ಲಿ ಹೃದಯಾಘಾತದಿಂದ ಸಾವನಪ್ಪಿದ್ರು ಎಂದು ಬಸವರಾಜು ಜೆ.ಡಿ.ಎಸ್ ವಿರುದ್ಧ ಆರೋಪ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments