Select Your Language

Notifications

webdunia
webdunia
webdunia
webdunia

ಸಮ್ಮಿಶ್ರ ಸರಕಾರದಲ್ಲಿ ನೆಲಬಾಂಬ್ ಗಳಿವೆ ಎಂದ ಬಿಜೆಪಿ ಶಾಸಕ!

ಸಮ್ಮಿಶ್ರ ಸರಕಾರದಲ್ಲಿ ನೆಲಬಾಂಬ್ ಗಳಿವೆ ಎಂದ ಬಿಜೆಪಿ ಶಾಸಕ!
ದಾವಣಗೆರೆ , ಭಾನುವಾರ, 8 ಜುಲೈ 2018 (17:42 IST)
ಕೇವಲ ಆರು ಜಿಲ್ಲೆಗಳಿಗೆ ಮಾತ್ರ ಸಿಎಂ ಕುಮಾರಸ್ವಾಮಿ ಬಜೆಟ್ ಮಂಡಿಸಿದ್ದಾರೆ ಎಂದು
ದಾವಣಗೆರೆಯಲ್ಲಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ. ರೈತರ ಸಾಲ ಮನ್ನಾ ಬಗ್ಗೆ ಸ್ಪಷ್ಟ ಪಡಿಸಿಬೇಕು. ವಿಳಂಬವಾದ್ರೆ ಇದೇ 12 ರಂದು ರಾಜ್ಯಾದ್ಯಂತ ಬಿಜೆಪಿ ಹೋರಾಟ ಮಾಡಲಿದೆ. ರೈತ ಸಾಲದ ಬಗ್ಗೆ ಸ್ಪಷ್ಟತೆ ಇಲ್ಲಾ.

ರಾಜ್ಯದಲ್ಲಿ  ಐದಾರೂ ಅಧಿಕಾರ ಕೇಂದ್ರಗಳಿವೆ. ದೇವೇಗೌಡರು ರಿಮೋಟ್ ಕಂಟ್ರೋಲರ್, ಎಚ್ .ಡಿ. ರೇವಣ್ಣ ಸೂಪರ್ ಸಿಎಂ, ಕುಮಾರಸ್ವಾಮಿ ನಾಕಾವಸ್ತೆ ಸಿಎಂ, ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಇನ್ನೊಂದು ಅಧಿಕಾರ ಕೇಂದ್ರ., ತಮ್ಮ ಅಸ್ಥಿತ್ವಕ್ಕಾಗಿ ಪರಮೇಶ್ವ ಹಾಗೂ ಡಿಕೆಶಿ ಹೋರಾಟ ಮಾಡುತ್ತಿದ್ದಾರೆ ಎಂದರು.

ಸಮ್ಮಿಶ್ರ ಸರ್ಕಾರದಲ್ಲಿ ನೆಲಬಾಂಬ್ ಗಳಿವೆ. ಲೋಕ ಚುನಾವಣೆಗೂ ಮುನ್ನವೇ ಈ ನೆಲ ಬಾಂಬ್ ಗಳು ಸ್ಪೋಟಗೊಳ್ಳಲಿವೆ ಎಂದು  ದಾವಣಗೆರೆಯಲ್ಲಿ ರೇಣುಕಾಚಾರ್ಯ ವ್ಯಂಗ್ಯವಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದೇವಸ್ಥಾನ ಉದ್ಘಾಟನೆ ವಿಚಾರ: ಹಾಲಿ- ಮಾಜಿ ಶಾಸಕ ಕಿತ್ತಾಟ