Webdunia - Bharat's app for daily news and videos

Install App

ಶಿಕ್ಷಣ ಇಲಾಖೆ ಅನಾಥವಾಗಿದೆ ಎಂದ ಬಿಜೆಪಿ ಎಂ ಎಲ್ ಸಿ

Webdunia
ಶುಕ್ರವಾರ, 16 ನವೆಂಬರ್ 2018 (19:30 IST)
ಸಮ್ಮಿಶ್ರ ಸರ್ಕಾರದಲ್ಲಿ ಶಿಕ್ಷಣ ಇಲಾಖೆಯ ಸಮಸ್ಯೆಗಳನ್ನು ಬಗೆಹರಿಸಲು ಗಮನ ನೀಡಿಲ್ಲ. ಶಿಕ್ಷಣ ಇಲಾಖೆ ಪಾರ್ಶ್ವವಾಯು ಪೀಡಿತವಾಗಿದ್ದು, ತಮ್ಮ ಬಳಿ ಇರುವ ಶಿಕ್ಷಣ ಇಲಾಖೆ ಖಾತೆಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬೇರೊಬ್ಬ ಸಚಿವರಿಗೆ ವಹಿಸಿಕೊಡಬೇಕು ಎಂದು ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಆಗ್ರಹಿಸಿದ್ದಾರೆ.

ಶಿಕ್ಷಣ ಇಲಾಖೆ ಅನಾಥವಾದಂತಿದೆ. ಅದಕ್ಕೆ ಸಚಿವರೊಬ್ಬರನ್ನು ನೇಮಕ ಮಾಡಬೇಕು ಎಂದು ವಿಧಾನಪರಿಷತ್ ಬಿಜೆಪಿ ಶಾಸಕ ಅರುಣ್ ಶಹಾಪೂರ ಆಗ್ರಹಿಸಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬಳಿಯಲ್ಲಿ ಶಿಕ್ಷಣ ಖಾತೆ ಇದ್ದು, ಅವರೊಂದಿಗೆ ಚರ್ಚೆ ನಡೆಸಲು ಸಾಧ್ಯವಿಲ್ಲ. ಜೆಡಿಎಸ್ ಶಾಸಕರು ಮಾತ್ರ ಅವರನ್ನು ಭೇಟಿ ಮಾಡಲು ಸಾಧ್ಯ. ಹಾಗಾಗಿ ಶಿಕ್ಷಣ ಇಲಾಖೆಗೆ ಸಚಿವರೊಬ್ಬರ ನೇಮಕ ಆಗಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ನಿರ್ದೇಶಕರು ವರ್ಗಾವಣೆಗೊಂಡು ನಾಲ್ಕು ತಿಂಗಳುಗಲೇ ಕಳೆದಿದೆ. ಪೂರ್ಣಾವಧಿ ನಿರ್ದೇಶಕರಿಲ್ಲದೆ ಇಲಾಖೆಯಲ್ಲಿ ಶಿಕ್ಷಕರ ವರ್ಗಾವಣೆ ಗೊಂದಲದ ಗೂಡಾಗಿದೆ ಎಂದು ಅವರು ಆರೋಪಿಸಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments