Webdunia - Bharat's app for daily news and videos

Install App

ಅಂಗಡಿಗೆ ಹೋದ ಅಪ್ರಾಪ್ತ ಬಾಲಕಿಗೆ ಬಂತು ಮೈತುಂಬ ರಕ್ತ

Webdunia
ಸೋಮವಾರ, 19 ಆಗಸ್ಟ್ 2019 (20:11 IST)
ಅಂಗಡಿಗೆ ವಸ್ತುಗಳನ್ನು ತರಲು ಹೋಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಗಂಭೀರ ಗಾಯಗೊಂಡಿದ್ದಾಳೆ.

ಬಾಲಕಿ ಮೇಲೆ ಬೀದಿ‌ನಾಯಿಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ಬಾಲಕಿ ಗಂಭೀರ ಗಾಯಗೊಂಡಿರುವ ಘಟನೆ ದಾವಣಗೆರೆ ನಗರದ ದೇವರಾಜ್ ಅರಸ್ ಬಡಾವಣೆ ಎ ಬ್ಲಾಕ್ 8ನೇ ಕ್ರಾಸ್ ನಲ್ಲಿ‌ ನಡೆದಿದೆ.

ಕಿರಣ್ ಅವರ ಪುತ್ರಿ ಖುಷಿ (8) ಗಾಯಗೊಂಡಿರುವ ಬಾಲಕಿಯಾಗಿದ್ದಾಳೆ. ಬೆಳಿಗ್ಗೆ ಅಂಗಡಿಗೆ ವಸ್ತುಗಳನ್ನು ತರಲು ಹೋದ ಸಂದರ್ಭದಲ್ಲಿ ಐದಾರು ಬೀದಿ ನಾಯಿಗಳು ಬಾಲಕಿ ಮೇಲೆ ಎರಗಿ ಕಚ್ಚಿ ಗಾಯಗೊಳಿಸಿವೆ, ಭುಜ, ಕೈ ಸೇರಿದಂತೆ ಎರಡ್ಮೂರು ಕಡೆ ಕಚ್ಚಿದ್ದು, ಸ್ಥಳೀಯರು ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಬಾಲಕಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ‌.

ದೇವರಾಜ್ ಅರಸ್ ಬಡಾವಣೆಯಲ್ಲಿ ಬೀದಿನಾಯಿಗಳು, ಹಂದಿಗಳ ಉಪಟಳ ಹೆಚ್ಚಿದೆ.  ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಹಲವಾರು ಸಲ ದೂರು ನೀಡಲಾಗಿದೆ. ಆದರೂ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಂಡಿಲ್ಲ. ಈ ಕೂಡಲೇ ಬೀದಿ‌ನಾಯಿಗಳು, ಹಂದಿಗಳನ್ನು ಹಿಡಿದು ಸ್ಥಳಾಂತರಿಸಿ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments