Select Your Language

Notifications

webdunia
webdunia
webdunia
webdunia

ಕತ್ತು ಕೊಯ್ದ ಸ್ಥಿತಿಯಲ್ಲಿ ಮೆಡಿಕಲ್ ವಿದ್ಯಾರ್ಥಿಯ ಶವ ಪತ್ತೆ !?

ಕತ್ತು ಕೊಯ್ದ ಸ್ಥಿತಿಯಲ್ಲಿ ಮೆಡಿಕಲ್ ವಿದ್ಯಾರ್ಥಿಯ ಶವ ಪತ್ತೆ !?
ಕೋಲಾರ , ಶುಕ್ರವಾರ, 5 ಆಗಸ್ಟ್ 2022 (16:14 IST)
ಕೋಲಾರ : ಅನುಮಾನಾಸ್ಪದ ರೀತಿಯಲ್ಲಿ ಮೆಡಿಕಲ್ ಕಾಲೇಜ್ ವಿದ್ಯಾರ್ಥಿಯ ಶವ ಪತ್ತೆಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ನಗರ ಹೊರ ವಲಯದ ಟಮಕದಲ್ಲಿರುವ ದೇವರಾಜ ಅರಸು ಮೆಡಿಕಲ್ ಕಾಲೇಜು ಹಾಸ್ಟೆಲ್ನಲ್ಲಿ ಘಟನೆ ನಡೆದಿದೆ.

ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಅನ್ನೋದು ಹಾಸ್ಟೇಲ್ ವಿದ್ಯಾರ್ಥಿಗಳ ಮಾತಾಗಿದ್ದು, ರಾಜಸ್ಥಾನ ಮೂಲದ ಪ್ರದೀಪ್ ಶರ್ಮಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ಅಂತಿಮ ವರ್ಷದ ಫಾರೆನ್ಸಿಕ್ ಮೆಡಿಕಲ್ ವಿದ್ಯಾಭ್ಯಾಸ ಮಾಡುತ್ತಿದ್ದು, ಇಂದು ಕತ್ತು ಕೊಯ್ದ ರೀತಿಯಲ್ಲಿ ಶವ ಪತ್ತೆಯಾಗಿದೆ. 

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಾಗಾಗಿ ಆತ್ಮಹತ್ಯೆಯೋ ಅಥವಾ ಕೊಲೆಯೋ ಅನ್ನೋ ಅನುಮಾನ ಎದ್ದಿದೆ. ಗಲ್ ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಪತ್ನಿಯನ್ನು ಮನೆಯಿಂದ ಹೊರಹಾಕಿದ ಕುಡುಕ ಪತಿ!