Webdunia - Bharat's app for daily news and videos

Install App

ಚಿಕನ್ ರೋಲ್ ಕೊಟ್ಟಿಲ್ಲ ಅಂತಾ ಹುಡುಗರಿಂದ ಹೊಟೇಲ್ ಗೆ ಬೆಂಕಿ

Webdunia
ಮಂಗಳವಾರ, 13 ಡಿಸೆಂಬರ್ 2022 (18:22 IST)
ಚಿಕನ್  ರೋಲ್ ಕೊಟ್ಟಿಲ್ಲ ಎಂದು ಹೋಟೆಲ್ ಹುಡುಗರಿದ್ದ ರೂಂಗೆ ಬೆಂಕಿ ಇಟ್ಟಿರುವ ಆರೋಪದಡ ಇಬ್ಬರನ್ನು ಹನುಮಂತನಗರ ಪೊಲೀಸರು ಸೆರೆಹಿಡಿದಿದ್ದಾರೆ.
ನಿನ್ನೆ ತಡರಾತ್ರಿ ಹನುಮಂತನಗರ ಠಾಣಾ ವ್ಯಾಪ್ತಿಯಲ್ಲಿರುವ  ಕುಮಾರ್ ಹೋಟೆಲ್ ಗೆ ಚಿಕನ್ ರೋಲ್ ಗಾಗಿ  ದೇವರಾಜ್ ಅಂಡ್ ಟೀಂ ಬಂದಿತ್ತು‌. ಹೊಟೇಲ್ ಮುಚ್ಚುವ ಸಮಯವಾಗಿದ್ದರಿಂದ ಚಿಕನ್ ರೋಲ್ ಇಲ್ಲ ಟೈಂ ಆಗಿದೆ ಕ್ಲೋಸ್ ಮಾಡಲಾಗುತ್ತಿದೆ ಎಂದು ಹೊಟೇಲ್ ಸಿಬ್ಬಂದಿ ಹೇಳಿದ್ದಾನೆ. ಅಕ್ರೋಶಗೊಂಡ ದೇವರಾಜ್ ಹಾಗೂ ಸಹಚರರ ಹೋಟೆಲ್ ಸಿಬ್ಬಂದಿ ಗಲಾಟೆ ಮಾಡಿದ್ದಾರೆ. ಈ ವೇಳೆ ಕುಡಿದ ಅಮಲಿನಲ್ಲಿದ್ದ ಮೂವರನ್ನು  ಹೋಟೆಲ್ ಸಿಬ್ಬಂದಿ ಥಳಿಸಿ ಕಳುಹಿಸಿದ್ದಾರೆ. ಏಟು ತಿಂದ ಬಳಿಕ ದೇವರಾಜ್ ಅಂಡ್ ಟೀಂ ದೇವೇಗೌಡ ಪೆಟ್ರೋಲ್ ಬಂಕ್ ಗೆ ಹೋಗಿದ್ದಾರೆ. ಅಲ್ಲಿ ಬಾಟಲ್ ನಲ್ಲಿ ಎರಡು ಲೀಟರ್ ಪೆಟ್ರೋಲ್ ಖರೀದಿಸಿದ್ದಾರೆ. ನಂತರ ಸೀದಾ ಕುಮಾರ್ ಹೋಟೆಲ್ ಪಕ್ಕದಲ್ಲೇ ಇರುವ ಹೋಟೆಲ್‌ ಸಿಬ್ಬಂದಿಯ ರೂಂಗೆ ಬೆಂಕಿಯಿಟ್ಟಿದ್ದಾರೆ. ಮನೆಗೆ ಬಾಗಿಲು, ಕಿಟಕಿಗೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿ ಎಸ್ಕೇಪ್ ಆಗಿದ್ದಾರೆ. ಅದೃಷ್ಟವಶಾತ್ ಮನೆಯಲ್ಲಿ ವಾಸವಿದ್ದ ಹೋಟೆಲ್ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ‌. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಹನುಮಂತನಗರ ಪೊಲೀಸರು  ದೇವರಾಜ್ ಹಾಗೂ ಗಣೇಶ್ ಎಂಬುವರನ್ನು ಬಂಧಿಸಿ ಮತ್ತೋರ್ವನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುದ್ಧಿಮಾತು ಹೇಳಿದ ಗುರುವಿಗೆ ಟಿಫನ್ ಬಾಕ್ಸ್‌ನಲ್ಲಿ ತಂದ ಆಪತ್ತು

ಧರ್ಮಸ್ಥಳ ನಿರ್ಮಿಸಲ್ಪಟ್ಟಿದ್ದು, ಸತ್ಯ, ನಂಬಿಕೆ, ಸಮರ್ಪಣೆಯಿಂದ: ಎಸ್‌ಡಿಎಂ ಸಂಸ್ಥೆ

ಧರ್ಮಸ್ಥಳ ಬುರುಡೆ ರಹಸ್ಯದ ಮಾಸ್ಕ್‌ಮ್ಯಾನ್‌ ಬಗ್ಗೆ ಮೊದಲ ಪತ್ನಿ ಶಾಕಿಂಗ್ ಹೇಳಿಕೆ

ಧರ್ಮಸ್ಥಳವನ್ನೇ ನಡುಗಿಸಿದ ಯೂಟ್ಯೂಬರ್‌ ಸಮೀರ್‌ಗೆ ಇದೀಗ ಮುಖ ತೋರಿಸದ ಪರಿಸ್ಥಿತಿ

ಕಪಾಳಮೋಕ್ಷದ ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಸಿಎಂ ರೇಖಾ ಗುಪ್ತಾ

ಮುಂದಿನ ಸುದ್ದಿ
Show comments