Webdunia - Bharat's app for daily news and videos

Install App

ಚಿಕನ್ ರೋಲ್ ಕೊಟ್ಟಿಲ್ಲ ಅಂತಾ ಹುಡುಗರಿಂದ ಹೊಟೇಲ್ ಗೆ ಬೆಂಕಿ

Webdunia
ಮಂಗಳವಾರ, 13 ಡಿಸೆಂಬರ್ 2022 (18:22 IST)
ಚಿಕನ್  ರೋಲ್ ಕೊಟ್ಟಿಲ್ಲ ಎಂದು ಹೋಟೆಲ್ ಹುಡುಗರಿದ್ದ ರೂಂಗೆ ಬೆಂಕಿ ಇಟ್ಟಿರುವ ಆರೋಪದಡ ಇಬ್ಬರನ್ನು ಹನುಮಂತನಗರ ಪೊಲೀಸರು ಸೆರೆಹಿಡಿದಿದ್ದಾರೆ.
ನಿನ್ನೆ ತಡರಾತ್ರಿ ಹನುಮಂತನಗರ ಠಾಣಾ ವ್ಯಾಪ್ತಿಯಲ್ಲಿರುವ  ಕುಮಾರ್ ಹೋಟೆಲ್ ಗೆ ಚಿಕನ್ ರೋಲ್ ಗಾಗಿ  ದೇವರಾಜ್ ಅಂಡ್ ಟೀಂ ಬಂದಿತ್ತು‌. ಹೊಟೇಲ್ ಮುಚ್ಚುವ ಸಮಯವಾಗಿದ್ದರಿಂದ ಚಿಕನ್ ರೋಲ್ ಇಲ್ಲ ಟೈಂ ಆಗಿದೆ ಕ್ಲೋಸ್ ಮಾಡಲಾಗುತ್ತಿದೆ ಎಂದು ಹೊಟೇಲ್ ಸಿಬ್ಬಂದಿ ಹೇಳಿದ್ದಾನೆ. ಅಕ್ರೋಶಗೊಂಡ ದೇವರಾಜ್ ಹಾಗೂ ಸಹಚರರ ಹೋಟೆಲ್ ಸಿಬ್ಬಂದಿ ಗಲಾಟೆ ಮಾಡಿದ್ದಾರೆ. ಈ ವೇಳೆ ಕುಡಿದ ಅಮಲಿನಲ್ಲಿದ್ದ ಮೂವರನ್ನು  ಹೋಟೆಲ್ ಸಿಬ್ಬಂದಿ ಥಳಿಸಿ ಕಳುಹಿಸಿದ್ದಾರೆ. ಏಟು ತಿಂದ ಬಳಿಕ ದೇವರಾಜ್ ಅಂಡ್ ಟೀಂ ದೇವೇಗೌಡ ಪೆಟ್ರೋಲ್ ಬಂಕ್ ಗೆ ಹೋಗಿದ್ದಾರೆ. ಅಲ್ಲಿ ಬಾಟಲ್ ನಲ್ಲಿ ಎರಡು ಲೀಟರ್ ಪೆಟ್ರೋಲ್ ಖರೀದಿಸಿದ್ದಾರೆ. ನಂತರ ಸೀದಾ ಕುಮಾರ್ ಹೋಟೆಲ್ ಪಕ್ಕದಲ್ಲೇ ಇರುವ ಹೋಟೆಲ್‌ ಸಿಬ್ಬಂದಿಯ ರೂಂಗೆ ಬೆಂಕಿಯಿಟ್ಟಿದ್ದಾರೆ. ಮನೆಗೆ ಬಾಗಿಲು, ಕಿಟಕಿಗೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿ ಎಸ್ಕೇಪ್ ಆಗಿದ್ದಾರೆ. ಅದೃಷ್ಟವಶಾತ್ ಮನೆಯಲ್ಲಿ ವಾಸವಿದ್ದ ಹೋಟೆಲ್ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ‌. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಹನುಮಂತನಗರ ಪೊಲೀಸರು  ದೇವರಾಜ್ ಹಾಗೂ ಗಣೇಶ್ ಎಂಬುವರನ್ನು ಬಂಧಿಸಿ ಮತ್ತೋರ್ವನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments