ಬ್ರಹ್ಮ ರಥೋತ್ಸವದಲ್ಲಿ ಮುಗಿಲು ಮುಟ್ಟಿದ ಸಂಭ್ರಮ

Webdunia
ಶನಿವಾರ, 24 ಆಗಸ್ಟ್ 2019 (17:05 IST)
ಬ್ರಹ್ಮ ರಥೋತ್ಸವದ ಸಂಭ್ರಮ ಜೋರಾಗಿದ್ದು, ಸಹಸ್ರಾರು ಭಕ್ತರ ಜಯಘೋಷ ಮುಗಿಲು ಮುಟ್ಟಿದೆ.

ಮಂಡ್ಯ ಜಿಲ್ಲೆಯ  ಬೆಟ್ಟದ ಹೊಸೂರು ಕ್ಷೇತ್ರದಲ್ಲಿ ಉದ್ಭವ ಬೋಳಾರೆ ರಂಗನಾಥ ಸ್ವಾಮಿಯವರ ಬ್ರಹ್ಮ ರಥೋತ್ಸವದ ಸಂಭ್ರಮ ಕಳೆಗಟ್ಟಿದೆ. ಮುಗಿಲು ಮುಟ್ಟಿದ ಜಯಘೋಷಗಳೊಂದಿಗೆ ಸಹಸ್ರಾರು ಭಕ್ತರು ದರ್ಶನಕ್ಕೆ ಮುಂದಾಗುತ್ತಿದ್ದಾರೆ.  

ಮಂಡ್ಯ ಕೆ.ಆರ್.ಪೇಟೆ ಬೆಟ್ಟದ ಹೊಸೂರು ಗ್ರಾಮದ ಶ್ರೀ ಉದ್ಭವ ಬೋಳಾರೆ ರಂಗನಾಥಸ್ವಾಮಿ ಯವರ ಬ್ರಹ್ಮರಥೋತ್ಸವವು ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ನಡೆಯಿತು.

ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ರಥೋತ್ಸವದಲ್ಲಿ ಭಾಗವಹಿಸಿದ್ದರು. ಸಾಂಪ್ರದಾಯಿಕ ಪೂಜೆಯನ್ನು ಉತ್ಸವಮೂರ್ತಿಗೆ ಸಲ್ಲಿಸಿ ರಥೋತ್ಸವಕ್ಕೆ ತಹಶೀಲ್ದಾರ್ ಎಂ. ಶಿವಮೂರ್ತಿ ಚಾಲನೆ ನೀಡಿದರು. ಉಘೇ ಉಘೇ ರಂಗನಾಥ, ಉಘೇ ವೆಂಕಟರಮಣ, ಗೋವಿಂದ, ಗೋವಿಂದ ಎಂಬ ಜಯಘೋಷಗಳು ಮುಗಿಲು ಮುಟ್ಟಿದ್ದವು.

ಇದೇ ಸಂದರ್ಭದಲ್ಲಿ ಸಾಹಿತಿ ಬಲ್ಲೇನಹಳ್ಳಿ ಮಂಜುನಾಥ ಅವರು ಬರೆದಿರುವ ಬೆಟ್ಟದಹೊಸೂರಿನ  ಶ್ರೀ ಬೋಳಾರೆ ರಂಗನಾಥ ಸ್ವಾಮಿ ಕ್ಷೇತ್ರದರ್ಶನ ಕೃತಿಯನ್ನು ಚಂದ್ರಶೇಖರ್ ಬಿಡುಗಡೆಗೊಳಿಸಿದರು. ಚಿಕ್ಕ ತಿರುಪತಿಯೆಂದೇ ಪ್ರಖ್ಯಾತವಾಗುತ್ತಿರುವ ಬೆಟ್ಟದ ಹೊಸೂರು ಕ್ಷೇತ್ರಕ್ಕೆ ಭಕ್ತಸಾಗರವೇ ಹರಿದು ಬಂದಿತ್ತು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಕುರಿತ ಇಂಟ್ರಸ್ಟಿಂಗ್‌ ಮಾಹಿತಿ

ಸಿದ್ದರಾಮಯ್ಯ, ಡಿಕೆಶಿ ಕುರ್ಚಿ ಫೈಟ್ ನಡುವೆ ವೈರಲ್ ಆಗ್ತಿದೆ ಯಡಿಯೂರಪ್ಪ ಹಳೇ ವಿಚಾರ

ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಐತಿಹಾಸಿಕ ಕಾರ್ಯಕ್ರಮ ನಾಳೆ

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

ಮುಂದಿನ ಸುದ್ದಿ
Show comments