Webdunia - Bharat's app for daily news and videos

Install App

ವಿದ್ಯಾರ್ಥಿನಿಗೆ ಎದೆನೋವು, ಆಸ್ಪತ್ರೆಯತ್ತ ಬಸ್ ಚಾಲನೆ ಮಾಡಿ ಜೀವ ರಕ್ಷಿಸಿದ ಬಸ್ ಡ್ರೈವರ್, ಕಂಡಕ್ಟರ್‌

Sampriya
ಬುಧವಾರ, 31 ಜುಲೈ 2024 (13:41 IST)
Photo Courtesy X
ಮಂಗಳೂರು: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಗೆ ಎದೆನೋವು ಕಾಣಿಸಿಕೊಂಡಾಗ ಬಸ್ ಚಾಲಕ ಹಾಗೂ ನಿರ್ವಾಹಕ ಬಸ್‌ನ್ನು ಆ್ಯಂಬುಲೆನ್ಸ್ ಹಾಗೇ ಸೈರನ್ ಹಾಕಿಕೊಂಡು ನೇರವಾಗಿ ಆಸ್ಪತ್ರೆಗೆ ಚಲಾಯಿಸಿಕೊಂಡು ಹೋಗಿ ವಿದ್ಯಾರ್ಥಿನಿಗೆ ಚಿಕಿತ್ಸೆ ನೀಡಿ ಸಮಯ ಪ್ರಜ್ಞೆ ತೋರಿದ ಘಟನೆ ನಡೆದಿದೆ.

ರೂಟ್ ನಂ.13 ಎಫ್ ನ ಕೃಷ್ಣ ಪ್ರಸಾದ್ ಬಸ್ ಕೂಳೂರು ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಎದೆನೋವು ಕಾಣಿಸಿಕೊಂಡಿದೆ. ಇದನ್ನರಿತ ಬಸ್ ಚಾಲಕ, ನಿರ್ವಾಹಕರಾದ ಗಜೇಂದ್ರ ಕುಂದರ್, ಮಹೇಶ್ ಪೂಜಾರಿ ಹಾಗೂ ಸುರೇಶ್ ಅವರು ಬಸ್‌ನ್ನು ನೇರವಾಗಿ ಆಸ್ಪತ್ರೆಗೆ ಕಡೆ ಚಲಾಯಿಸಿದ್ದಾರೆ. ಕಂಕನಾಡಿಯಲ್ಲಿರುವ ಆಸ್ಪತ್ರೆಗೆ ತಲುಪಿದ ಅವರು ವಿದ್ಯಾರ್ಥಿಯನ್ನು ಎತ್ತಿಕೊಂಡು ಹೋಗಿ ದಾಖಲಿಸಿದ್ದಾರೆ.

ವಿದ್ಯಾರ್ಥಿನಿಗೆ ತಕ್ಷಣ ತುರ್ತು ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇನ್ನೂ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸಾಗಿಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಇದನ್ನು ನೋಡಿದವರ ಚಾಲಕ ಹಾಗೂ ನಿರ್ವಾಹಕರ ಸಮಯಪ್ರಜ್ಞೆಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಾಲಕ ಹಾಗೂ ನಿರ್ವಾಹಕರ ಕಾಳಜಿ ಬಗ್ಗೆ ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ ಅಭಿನಂದಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments