Select Your Language

Notifications

webdunia
webdunia
webdunia
webdunia

ಡಿ.10 ರೊಳಗೆ ಸಂಪುಟ ವಿಸ್ತರಣೆ ನಿಶ್ಚಿತ ಎಂದ ಕೆಪಿಸಿಸಿ ಅಧ್ಯಕ್ಷ

ಡಿ.10 ರೊಳಗೆ ಸಂಪುಟ ವಿಸ್ತರಣೆ ನಿಶ್ಚಿತ ಎಂದ ಕೆಪಿಸಿಸಿ ಅಧ್ಯಕ್ಷ
ಬೆಂಗಳೂರು , ಶುಕ್ರವಾರ, 30 ನವೆಂಬರ್ 2018 (18:23 IST)
ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯುವುದಕ್ಕೂ ಮೊದಲೇ ಸಂಪುಟ ವಿಸ್ತರಣೆಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹೇಳಿಕೆ ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡುರಾವ್, ಸಚಿವ ಸಂಪುಟ ವಿಸ್ತರಣೆಗೆ ಒತ್ತಡ ಹೇರಲು ಕೆಲ ಕಾಂಗ್ರೆಸ್ ಶಾಸಕರು ಮುಂಬೈಗೆ ತೆರಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ್ದು, ಅವರು, ಯಾವ ಶಾಸಕರು ಎಲ್ಲಿಗೆ ಬೇಕಾದರೂ ಹೋಗಬಹುದು. ಯಾರನ್ನೂ ಹಿಡಿದಿಟ್ಟುಕೊಂಡಿಲ್ಲ. ಆದರೆ ಸಂಪುಟ ವಿಸ್ತರಣೆ ಡಿ. 10 ರೊಳಗೆ ಆಗಲಿದೆ ಎಂದು ತಿಳಿಸಿದರು.
ಶಾಸಕರಿಗೆ ಸಂಪುಟ ವಿಸ್ತರಣೆಯಾಗಬೇಕು, ನಿಗಮ ಮಂಡಳಿ ಭರ್ತಿಯಾಗಬೇಕು, ಕ್ಷೇತ್ರದಲ್ಲಿ ಕೆಲಸ ಆಗಬೇಕು ಎಂಬ ಆಶಯ ಹೊಂದಿದ್ದಾರೆ. ಆದರೆ ಯಾರೂ ಪಕ್ಷ ಬಿಡುವ, ಸರ್ಕಾರಕ್ಕೆ ತೊಂದರೆ ಕೊಡುವ ಯೋಚನೆ ಮಾಡಿಲ್ಲ ಎಂದು ಸ್ಪಷ್ಟವಾಗಿ ಹೇಳಿದರು.

ಕಾಂಗ್ರೆಸ್ ಶಾಸಕರು ದೆಹಲಿ, ಮುಂಬೈ, ಸಿಂಗಾಪೂರ್ ಎಲ್ಲಿಗೆ ಬೇಕಾದರೂ ಹೋಗಬಹುದು. 10 ಜನ ಅಲ್ಲ, 50 ಜನ ಬೇಕಾದರೂ ಹೋಗಬಹುದು. ಅದೇನು ದೊಡ್ಡ ವಿಚಾರವಲ್ಲ ಎಂದರು.



Share this Story:

Follow Webdunia kannada

ಮುಂದಿನ ಸುದ್ದಿ

ಜಿಲ್ಲಾ ಪಂಚಾಯಿತಿ ಸಭೆಯಲ್ಲಿ ರಾಜೀನಾಮೆ ಘೋಷಣೆ ಮಾಡಿದ ಅಧ್ಯಕ್ಷೆ