Webdunia - Bharat's app for daily news and videos

Install App

ಮೊಬೈಲ್ ನಲ್ಲಿ ಚಿತ್ರಿಕರಣ ಮಾಡುತ್ತಿದ್ದವನ ಅಟ್ಟಿಸಿಕೊಂಡ ಬಂದ ಕಾಡಾನೆಗಳು!

Webdunia
ಸೋಮವಾರ, 3 ಡಿಸೆಂಬರ್ 2018 (15:36 IST)
ಅಲ್ಲಿ ಬೆಳ್ಳಂಬೆಳಿಗ್ಗೆ 20 ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಣಿಸಿಕೊಂಡಿತ್ತು. ಕಾಡಾನೆಗಳನ್ನು ಮೊಬೈಲ್ ನಲ್ಲಿ ಸೆರೆಹಿಡಿಯಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಕಾಡಾನೆಗಳು ಬಿಡದೇ ಬೆನ್ನಟ್ಟಿ ಬಂದವು. ಆ ಮೇಲೆ ಏನಾಯ್ತು ಗೊತ್ತಾ?

ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿಗೆ ಕಡಿವಾಣ ಬೀಳುತ್ತಿಲ್ಲ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಜೇಂದ್ರಪುರ ಗ್ರಾಮದ ಹೊಂಡದಲ್ಲಿ ಕೆಲವು ಹೊತ್ತು ಕಾಡಾನೆಗಳು ಆಟ ಆಡಿವೆ. ಆ ಗುಂಪಿನಲ್ಲಿ 5 ಕ್ಕೂ ಹೆಚ್ಚು ಮರಿ ಆನೆಗಳು ಇದ್ದವು. ಆನೆ ಹಿಂಡು ಕಂಡು ಗ್ರಾಮಸ್ಥರು ಭಯ ಭೀತರಾಗಿದ್ದಾರೆ. ಬೆಳೆ ನಷ್ಟದಿಂದ ಕಂಗಾಲಾಗಿರುವ ರೈತರು
ಕಾಡಾನೆಗಳನ್ನು ಕಂಡು ಹೈರಾಣಾಗುತ್ತಿದ್ದಾರೆ.

ಕಾಡಾನೆಗಳ ಚಿತ್ರವನ್ನು ಮೊಬೈಲ್ ನಲ್ಲಿ‌ ಸೆರೆಹಿಡಿಯುತ್ತಿದ್ದವನನ್ನು ಆನೆಗಳು ಓಡಿಸಿಕೊಂಡು ಬಂದಿವೆ. ಆ ವ್ಯಕ್ತಿ ಓಡಿ ಹೋಗಿ ಜೀವ ಉಳಿಸಿಕೊಂಡಿದ್ದಾನೆ.

ಆನೆ ಹಾವಳಿಗೆ ಪರಿಹಾರ ಕಂಡು ಹಿಡಿಯುವಂತೆ ಒಕ್ಕೊರಲ ಒತ್ತಾಯ ಕೇಳಿಬರುತ್ತಿದೆ. ಸ್ಥಳಕ್ಕೆ ಬಾರದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments