ಮಾಜಿ ಸಚಿವ ಎಂ.ಬಿ.ಪಾಟೀಲ್ ಸಹೋದರ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕೆ

Webdunia
ಗುರುವಾರ, 6 ಸೆಪ್ಟಂಬರ್ 2018 (14:52 IST)
ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ
ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ಸುನೀಲಗೌಡ ಪಾಟೀಲ್ ಮತಗಟ್ಟೆಗಳಿಗೆ ಭೇಟಿ ನೀಡಿದರು. ಸುನೀಲಗೌಡ ಪಾಟೀಲ್, ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಂ.ಬಿ.ಪಾಟೀಲ್ ರ ಸಹೋದರರಾಗಿದ್ದಾರೆ.

ವಿಜಯಪುರ ನಗರದ ಜಿಲ್ಲಾ ಪಂಚಾಯತಿ ಮತಗಟ್ಟೆಗೆ ಬೆಂಬಲಿಗರೊಂದಿಗೆ ಭೇಟಿ ನೀಡಿದರು. ವಿಜಯಪುರ ಜಿಲ್ಲಾ ಪಂಚಾಯತಿ ಅಧ್ಯಕ್ಷೆ, ಜಿಲ್ಲಾ ಪಂಚಾಯತಿ ಸದಸ್ಯರು, ಮಹಾನಗರ ಪಾಲಿಕೆ ಸದಸ್ಯರು, ಇನ್ನಿತರ ಮತದಾರರು,  ಮಾಜಿ ಶಾಸಕ ವಿಠ್ಠಲ ಕಟಕಧೋಂಡ, ವಿಡಿಎ ಮಾಜಿ ಅಧ್ಯಕ್ಷ ಚಂದ್ರಕಾಂತ ಶೆಟ್ಟಿ ಸೇರಿದಂತೆ ಬೆಂಬಲಿಗರು ಸಾಥ್ ನೀಡಿದರು. 
ಮಾರ್ಗಗಳನ್ನ ಆಯ್ಕೆ ಮಾಡಿಕೊಂಡು ಎಲ್ಲಾ ಮತಗಟ್ಟೆಗಳಿಗೆ ಭೇಟಿ ನೀಡುವಂತೆ, ಮತದಾರರ ಮನ ಒಲಿಸುವಂತೆ ಸುನೀಲಗೌಡ ಪಾಟೀಲರಿಂದ ತಮ್ಮ ಬೆಂಬಲಿಗರಿಗೆ ಸೂಚನೆ ನೀಡಲಾಯಿತು.

ಅಭ್ಯರ್ಥಿ ಸುನೀಲಗೌಡ ಪಾಟೀಲ್ ಮಾತನಾಡಿ, ಅವಳಿ ಜಿಲ್ಲೆಯ ಸಚಿವರು, ಹಾಲಿ ಮಾಜಿ ಶಾಸಕರು ಹಾಗೂ ಪಕ್ಷದ ಜನಪ್ರತಿನಿಧಿಗಳು ನನ್ನ ಪರವಾಗಿ ಒಗ್ಗಟ್ಟಾಗಿ ಪ್ರಚಾರ ಕೈಗೊಂಡಿದ್ದಾರೆ. ಇದು ನನ್ನ ಜೀವನದಲ್ಲಿ ಮೊದಲ ಚುನಾವಣೆ.
ಶೇಕಡಾ ಅರವತ್ತೈದರಿಂದ ಎಪ್ಪತ್ತು ಪರ್ಸೆಂಟ್ ಸದಸ್ಯ ಮತದಾರರು ನಮ್ಮ ಪಕ್ಷದವರು. ಅತ್ಯಂತ ಬಹುಮತದಿಂದ ನಾನು ಆರಿಸಿ ಬರುವುದು ನಿಶ್ಚಿತ ಎಂದರು. ಎದುರಾಳಿ ಬಿಜೆಪಿ ಪಕ್ಷದ ಅಭ್ಯರ್ಥಿ ಗೂಳಪ್ಪ ಶೆಟಗಾರ ಸಹ ನಮ್ಮವರೇ.
ನಮ್ಮ ಪಕ್ಷದಿಂದ ಆಯ್ಕೆಯಾದ ಮಹಾನಗರ ಪಾಲಿಕೆ ಸದಸ್ಯರೇ ಆಗಿದ್ದರು ಎಂದರು. ಸುನೀಲಗೌಡ ಪಾಟೀಲ್, ಮಾಜಿ ಸಚಿವ, ಹಾಲಿ ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ್ ಅವರ ಸಹೋದರರಾಗಿದ್ದಾರೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಘಾಟಬೋರಳ್ ಗ್ರಾಮದಲ್ಲಿ ಮಂಗನ ದಾಳಿಗೆ ಬೆಚ್ಚಿದ್ದ ಜನತೆ ಇದೀಗ ನಿರಾಳ

ನಾಳೆ ಡಿಕೆ ಶಿವಕುಮಾರ್ ಪ್ರಮಾಣವಚನ: ಶಕ್ತಿಕೇಂದ್ರದ ಸಿಬ್ಬಂದಿಗೆ ಅರ್ಧದಿನ ರಜೆ

ಕೇರಳ ಸದ್ಯ ಎದುರಿಸುತ್ತಿರುವ ಸವಾಲಿನ ಬಗ್ಗೆ ಸಿಎಂ ವಿಡಿ ಸತೀಶನ್ ಕಳವಳ, ಇಲ್ಲಿದೆ ಮಾಹಿತಿ

ನಾಳೆ ಸಂಚಾರಕ್ಕೆ ಮುಕ್ತವಾಗಬೇಕಿದ್ದ ಬೆಂಗಳೂರು ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಹಠಾತ್ ಬದಲಾವಣೆ

ಕ್ರೈಂ ಮಾಡಿದಾಗ ಯುವಕ, ತೀರ್ಪು ಪ್ರಕಟದ ಸಮಯದಲ್ಲಿ ನಡೆಯಕ್ಕಾಗದ ಸ್ಥಿತಿ, ಏನಿದು ಅಚ್ಚರಿ ಘಟನೆ

ಮುಂದಿನ ಸುದ್ದಿ
Show comments