Webdunia - Bharat's app for daily news and videos

Install App

ಮಾಜಿ ಸಚಿವ ಎಂ.ಬಿ.ಪಾಟೀಲ್ ಸಹೋದರ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕೆ

Webdunia
ಗುರುವಾರ, 6 ಸೆಪ್ಟಂಬರ್ 2018 (14:52 IST)
ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ
ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ಸುನೀಲಗೌಡ ಪಾಟೀಲ್ ಮತಗಟ್ಟೆಗಳಿಗೆ ಭೇಟಿ ನೀಡಿದರು. ಸುನೀಲಗೌಡ ಪಾಟೀಲ್, ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಂ.ಬಿ.ಪಾಟೀಲ್ ರ ಸಹೋದರರಾಗಿದ್ದಾರೆ.

ವಿಜಯಪುರ ನಗರದ ಜಿಲ್ಲಾ ಪಂಚಾಯತಿ ಮತಗಟ್ಟೆಗೆ ಬೆಂಬಲಿಗರೊಂದಿಗೆ ಭೇಟಿ ನೀಡಿದರು. ವಿಜಯಪುರ ಜಿಲ್ಲಾ ಪಂಚಾಯತಿ ಅಧ್ಯಕ್ಷೆ, ಜಿಲ್ಲಾ ಪಂಚಾಯತಿ ಸದಸ್ಯರು, ಮಹಾನಗರ ಪಾಲಿಕೆ ಸದಸ್ಯರು, ಇನ್ನಿತರ ಮತದಾರರು,  ಮಾಜಿ ಶಾಸಕ ವಿಠ್ಠಲ ಕಟಕಧೋಂಡ, ವಿಡಿಎ ಮಾಜಿ ಅಧ್ಯಕ್ಷ ಚಂದ್ರಕಾಂತ ಶೆಟ್ಟಿ ಸೇರಿದಂತೆ ಬೆಂಬಲಿಗರು ಸಾಥ್ ನೀಡಿದರು. 
ಮಾರ್ಗಗಳನ್ನ ಆಯ್ಕೆ ಮಾಡಿಕೊಂಡು ಎಲ್ಲಾ ಮತಗಟ್ಟೆಗಳಿಗೆ ಭೇಟಿ ನೀಡುವಂತೆ, ಮತದಾರರ ಮನ ಒಲಿಸುವಂತೆ ಸುನೀಲಗೌಡ ಪಾಟೀಲರಿಂದ ತಮ್ಮ ಬೆಂಬಲಿಗರಿಗೆ ಸೂಚನೆ ನೀಡಲಾಯಿತು.

ಅಭ್ಯರ್ಥಿ ಸುನೀಲಗೌಡ ಪಾಟೀಲ್ ಮಾತನಾಡಿ, ಅವಳಿ ಜಿಲ್ಲೆಯ ಸಚಿವರು, ಹಾಲಿ ಮಾಜಿ ಶಾಸಕರು ಹಾಗೂ ಪಕ್ಷದ ಜನಪ್ರತಿನಿಧಿಗಳು ನನ್ನ ಪರವಾಗಿ ಒಗ್ಗಟ್ಟಾಗಿ ಪ್ರಚಾರ ಕೈಗೊಂಡಿದ್ದಾರೆ. ಇದು ನನ್ನ ಜೀವನದಲ್ಲಿ ಮೊದಲ ಚುನಾವಣೆ.
ಶೇಕಡಾ ಅರವತ್ತೈದರಿಂದ ಎಪ್ಪತ್ತು ಪರ್ಸೆಂಟ್ ಸದಸ್ಯ ಮತದಾರರು ನಮ್ಮ ಪಕ್ಷದವರು. ಅತ್ಯಂತ ಬಹುಮತದಿಂದ ನಾನು ಆರಿಸಿ ಬರುವುದು ನಿಶ್ಚಿತ ಎಂದರು. ಎದುರಾಳಿ ಬಿಜೆಪಿ ಪಕ್ಷದ ಅಭ್ಯರ್ಥಿ ಗೂಳಪ್ಪ ಶೆಟಗಾರ ಸಹ ನಮ್ಮವರೇ.
ನಮ್ಮ ಪಕ್ಷದಿಂದ ಆಯ್ಕೆಯಾದ ಮಹಾನಗರ ಪಾಲಿಕೆ ಸದಸ್ಯರೇ ಆಗಿದ್ದರು ಎಂದರು. ಸುನೀಲಗೌಡ ಪಾಟೀಲ್, ಮಾಜಿ ಸಚಿವ, ಹಾಲಿ ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ್ ಅವರ ಸಹೋದರರಾಗಿದ್ದಾರೆ.  



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments