Select Your Language

Notifications

webdunia
webdunia
webdunia
webdunia

ದ್ವೇಷದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿಲ್ಲ: ದಿನೇಶ ಗುಂಡೂರಾವ್

ದ್ವೇಷದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿಲ್ಲ: ದಿನೇಶ ಗುಂಡೂರಾವ್
ಬೆಂಗಳೂರು , ಸೋಮವಾರ, 21 ಆಗಸ್ಟ್ 2017 (12:41 IST)
ದ್ವೇಷದ ರಾಜಕಾರಣ ಮಾಡುವುದು ಕಾಂಗ್ರೆಸ್ ಪಕ್ಷದ ಸಂಸ್ಕ್ರತಿಯಲ್ಲ. ದ್ವೇಷದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಖಾಸಗಿ ದೂರು. ರಾಜಕೀಯ ದ್ವೇಷದಿಂದಾಗಿ ದೂರು ದಾಖಲಾಗಿಲ್ಲ. ವಿಪಕ್ಷಗಳು ಆರೋಪ ಮಾಡುವ ಮೊದಲು ಸತ್ಯ ಸಂಗತಿಯನ್ನು ಅರಿಯಲಿ ಎಂದು ತಿಳಿಸಿದ್ದಾರೆ.
 
ರಾಜಕೀಯವಾಗಿ ಎಸಿಬಿ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎನ್ನುವ ಆರೋಪಗಳಲ್ಲಿ ಸತ್ಯಾಂಶವಿಲ್ಲ. ನಮ್ಮ ಸರಕಾವಿದ್ದಾಗಲೇ ನನ್ನ ವಿರುದ್ಧ ಎಸಿಬಿಯಲ್ಲಿ ದೂರು ದಾಖಲಾಗಿತ್ತು ಎನ್ನುವುದನ್ನು ಬಿಜೆಪಿ ಮುಖಂಡರು ನೆನೆಪಿಸಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.
 
ರಾಜ್ಯ ಸರಕಾರ ಯಾವತ್ತೂ ಎಸಿಬಿಯನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಬಿಜೆಪಿ ನೀಡಿದ ದೂರನ್ನು ರಾಜ್ಯಪಾಲರು ಒಪ್ಪುವುದಿಲ್ಲ.  ಕೇವಲ ಆರೋಪಗಳನ್ನು ಮಾಡುವುದೇ ಬಿಜೆಪಿ ನಾಯಕರ ಹವ್ಯಾಸವಾಗಿದೆ ಎಂದು ತಿಳಿಸಿದ್ದಾರೆ.
 
ಇಂದಿರಾ ಕ್ಯಾಂಟಿನ್‌ ಜನಪ್ರಿಯತೆಯನ್ನು ಅರಗಿಸಿಕೊಳ್ಳಲು ಬಿಜೆಪಿಗೆ ಸಾಧ್ಯವಾಗುತ್ತಿಲ್ಲ. ಹತಾಷೆ ಭಾವನೆಯಿಂದಾಗಿ ಮನಬಂದಂತೆ ಸರಕಾರದ ವಿರುದ್ಧ ಆರೋಪ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. 
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಯಡಿಯೂರಪ್ಪ ತಪ್ಪು ಮಾಡಿದ್ರೆ ಬಿಡಲು ಆಗುತ್ತಾ?: ಸಿಎಂ ಸಿದ್ದರಾಮಯ್ಯ