Webdunia - Bharat's app for daily news and videos

Install App

ಕಾಂಗ್ರೆಸ್ ಪ್ರಭಾವಿ ಶಾಸಕರ ಕ್ಷೇತ್ರದಲ್ಲಿ ಸ್ಮಶಾನ ಭೂಮಿಗೆ ಪರದಾಟ!

Webdunia
ಶನಿವಾರ, 4 ಆಗಸ್ಟ್ 2018 (16:54 IST)
ಆ ಗ್ರಾಮದಲ್ಲಿ  ಸುಮಾರು 5 ಸಾವಿರ ಜನರು ವಾಸಿಸುತ್ತಿದ್ದಾರೆ. ಗ್ರಾಮ ಪಂಚಾಯಿತಿ ಸಹ ಇದೆ. ಆದರೆ  ಸ್ಮಶಾನ ಇಲ್ಲದ ಕಾರಣ ಸತ್ತ ನಂತರ  ಶವಗಳ ಅಂತ್ಯ ಸಂಸ್ಕಾರ ಮಾಡುವುದು  ಗ್ರಾಮದಲ್ಲೆ ಇರುವ ರಸ್ತೆ ಎರಡು ಬದಿಗಳಲ್ಲಿ ಎಂದರೆ ನಂಬಲೇಬೇಕು. ಅಂದ್ಹಾಗೆ ಈ ಕ್ಷೇತ್ರದ ಶಾಸಕರು ಪ್ರಭಾವಿ ಕಾಂಗ್ರೆಸ್ ಮುಖಂಡರು ಎನ್ನುವುದು ವಿಶೇಷ.

ಬೆಳಗಾವಿ ಜಿಲ್ಲೆಯ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ  ಆಡಳಿತ ಸರ್ಕಾರದ ಪ್ರಭಾವಿ ಮಹಿಳೆ ಮತ್ತು ಈ ಕ್ಷೇತ್ರದ ಶಾಸಕರು ಆದ  ಲಕ್ಷ್ಮಿ ಹೆಬ್ಬಾಳ್ಕರ್ ರವರ ವ್ಯಾಪ್ತಿಯಲ್ಲಿ ಬರುವ  ಕುಕ್ಕಡೊಳ್ಳಿ ಗ್ರಾಮದ ಸಮಸ್ಯೆ. ಮನೆಯ ಹಿಂಭಾಗದ ಜಾಗಗಳಲ್ಲಿ, ಕೆರೆ ಕಟ್ಟೆಯ ಮೇಲ್ಬಾಗದಲ್ಲಿ  ಅಂತ್ಯ ಸಂಸ್ಕಾರ ಮಾಡಲಾಗುತ್ತಿದೆ. ಸರ್ಕಾರಕ್ಕೆ, ಜನಪ್ರತಿನಿಧಿಗಳಿಗೆ  ಪದೇ ಪದೇ ಈ ಗ್ರಾಮದ ಗ್ರಾಮಸ್ಥರು  ಸ್ಮಶಾನ ಮಂಜೂರು ಮಾಡುವಂತೆ ಒತ್ತಾಯ ಮಾಡಿದ್ದಾರೆ. ಆದರೆ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಅವರ ಆಶ್ವಾಸನೆ ಗಳು ಆಗೇ ಉಳಿದಿವೆ. ಇಲ್ಲಿ ವಾಸಿಸುವ ಜನ ಬಹುತೇಕ ಕಟ್ಟಡ ಕಟ್ಟುವ ಕಾರ್ಮಿಕರೇ ಹೆಚ್ಛಾಗಿ ವಾಸಿಸುತ್ತಿದ್ದಾರೆ.

ಶವಗಳನ್ನು ಗ್ರಾಮದ ರಸ್ತೆ ಅಕ್ಕ ಪಕ್ಕದ ಜಾಗದಲ್ಲಿ ಅಂತ್ಯ ಸಂಸ್ಕಾರ ಮಾಡುವುದರಿಂದ ರಾತ್ರಿ ವೇಳೆಯಲ್ಲಿ  ಗ್ರಾಮದಲ್ಲಿ ಸಂಚರಿಸುವುದಕ್ಕೆ ಇಲ್ಲಿನ ಗ್ರಾಮಸ್ಥರು ಭಯಪಡುತ್ತಿದ್ದಾರೆ. ನಿತ್ಯ ಜೀವ ಕೈಯಲ್ಲಿ ಹಿಡಿದು ಭಯದಿಂದಲೇ ಜನರು ಬದುಕು ಸಾಗಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರ್ಷದ ಹಿಂದೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಹೆಡ್‌ಕಾನ್‌ಸ್ಟೇಬಲ್‌ ಕ್ವಾಟ್ರಸ್‌ನಲ್ಲೇ ಆತ್ಮಹತ್ಯೆ

ಅತ್ಯಾಚಾರ ಪ್ರಕರಣ: ಇದೇ 30ರಂದು ಪ್ರಜ್ವಲ್ ರೇವಣ್ಣಗೆ ಜಾಮೀನಾ, ಜೈಲಾ, ಮಹತ್ವದ ತೀರ್ಪು

ಲೈವ್‌ನಲ್ಲಿ ವರದಿ ಮಾಡುತ್ತಿರುವಾಗಲೇ ಪ್ರವಾಹದಲ್ಲಿ ಕೊಚ್ಚಿ ಹೋದ ಪಾಕ್‌ ವರದಿಗಾರ, Viral Vdeo

ಶಾಸಕರು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವಾಗಲೇ ರಮ್ಮಿ ಆಡುತ್ತಾ ಕೂತಾ ಉಪ ಅರಣ್ಯ ಸಂರಕ್ಷಣಾಧಿಕಾರಿ

ನೂರಾರು ಹುಡುಗರ ಗುಂಪೊಂದು ಹಾವು ಹಿಡಿದು ಗುಡ್ಡವೇರಿದ ವಿಡಿಯೋ, ಭಯಾನಕವಾಗಿರುವ ಸಂಪ್ರದಾಯದ ಹಿಂದಿದೆ ನಂಬಿಕೆ

ಮುಂದಿನ ಸುದ್ದಿ
Show comments