Webdunia - Bharat's app for daily news and videos

Install App

ಸಂಭ್ರಮದ ಮನೆಯಲ್ಲಿ ಸ್ಮಶಾನದ ಮೌನ ತಾಳಿತು!?

Webdunia
ಬುಧವಾರ, 18 ಮೇ 2022 (12:17 IST)
ಚಾಮರಾಜನಗರ : ಆತ ಕೆಲಸ ಮುಗಿಸಿಕೊಂಡು ಮನೆಗೆ ಬಂದಿದ್ದನಂತೆ. ಅಷ್ಟರಲ್ಲೇ ಆತನ ಸ್ನೇಹಿತ ಫೋನ್ ಮನೆಯಿಂದ ಹೊರ ಬರಲು ಹೇಳಿದ್ದಾನೆ.
 
ಮನೆಯಿಂದ ಹೊರ ಬಂದವನು ನಡು ರಸ್ತೆಯಲ್ಲೇ ಭೀಕರವಾಗಿ ಕೊಲೆಯಾಗಿ ಹೋಗಿದ್ದಾನೆ. ಇದರಿಂದ ಇಡೀ ಊರೇ ಬೆಚ್ಚಿ ಬಿದ್ದಿದೆ. ಈ ಮನೆಯಲ್ಲಿ ಇನ್ನೆರಡು ದಿನದಲ್ಲಿ ಸಂಭ್ರಮ ಮನೆ ಮಾಡಬೇಕಿತ್ತು. ಆದ್ರೆ ಇದೀಗಾ ಆ ಮನೆ ಸ್ಮಶಾನ ಮೌನ ಆವರಿಸಿದೆ.

ಸಂಭ್ರಮದಲ್ಲಿರಬೇಕಾದ ಮನೆಯವರೆಲ್ಲ ಕಣ್ಣೀರ ಕೋಡಿ ಹರಿಸುತ್ತಿದ್ದಾರೆ.ಹೌದು, ಇಷ್ಟಕ್ಕೆಲ್ಲ ಕಾರಣ ಈ ಬೀಕರ ಹತ್ಯೆ.ಈತನ ಹೆಸರು ಸಂಜಯ್ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ನಿವಾಸಿ. ಗುಂಡ್ಲುಪೇಟೆ ತರಕಾರಿ ಮಾರುಕಟ್ಟೆಯಲ್ಲಿ ಈತ ಕೆಲಸ ಮಾಡಿಕೊಂಡಿದ್ದನಂತೆ.  ಆದ್ರೆ ನಿನ್ನೆ(ಸೋಮವಾರ) ರಾತ್ರಿ ಸ್ನೇಹಿತರೆ ಈತನಿಗೆ ಸ್ಕೆಚ್ ಹಾಕಿ ಕೊಲೆ ಮಾಡಿದ್ದಾರೆ.

ಹೌದು, ನಿನ್ನೆ ರಾತ್ರಿ ಸಂಜಯ್ ಕೆಲಸ ಮುಗಿಸಿಕೊಂಡು ಸಂಜಯ್ ಮನೆಗೆ ಬಂದಿದ್ದನಂತೆ. ಇನ್ನೆನು ಒಂದೆರೆಡು ದಿನದಲ್ಲಿ ಈತನ ಎಂಗೇಜ್ಮೆಂಟ್ ನಡೆಯಬೇಕಿತ್ತು. ಇದರ ಖುಷಿಯಲ್ಲಿ ಮನೆಯವರೆಲ್ಲ ಇದ್ದರು. ಈ ವೇಳೆ ಸ್ನೇಹಿತನೊಬ್ಬ ಕರೆ ಮಾಡಿ ತಮ್ಮ ಬೀದಿಯ ಅರಳಿ ಕಟ್ಟೆಯ ಬಳಿಗೆ ಬರಲು ಹೇಳಿದ್ದಾನೆ.

ಅದರಂತೆ ಅರಳಿ ಕಟ್ಟೆ ಬಳಿಗೆ ಬಂದವನಿಗೆ ಅಲ್ಲೆ ಇದ್ದ ಅಭಿಲಾಷ್ ಎಂಬಾತ ಎದೆಯ ಭಾಗಕ್ಕೆ ಚಾಕು ಹಾಕಿದ್ದಾನೆ. ಅಲ್ಲೆ ಇದ್ದವರು ನೋಡ ನೋಡುತ್ತಿದ್ದಂತೆ ಸಂಜಯ್ ಕೊಲೆಯಾಗಿ ಹೋಗಿದ್ದಾನೆ. ಸ್ನೇಹದ ಹೆಸರಿನಲ್ಲಿ ಕರೆದು ಕೊಲೆ ಮಾಡಿದ್ದಾರೆ ಅಂತ ಕುಟುಂಬಸ್ಥರು ಇಡೀ ಶಾಪ ಹಾಕಿದ್ರು.

ಕೊಲೆಗೆ ಈ ವರೆಗು ಯಾರಿಗು ಸರಿಯಾದ ಮಾಹಿತಿ ಇಲ್ಲ.ಮೊನ್ನೆ ಗುಂಡ್ಲುಪೇಟೆಯಲ್ಲಿ ನಡೆದ ಪಟ್ಟಲದಮ್ಮ ಜಾತ್ರೆಯಲ್ಲಿ ಸಂಜಯ್ ಹಾಗೂ ಕೆಲ ಹುಡುಗರ ನಡುವೆ ಗಲಾಟೆಯಾಗಿತ್ತಂತೆ.ಇದೇ ರೀತಿ ಈ ಹಿಂದೆ ಕೂಡ ಸಂಜಯ್ ಹಾಗೂ ಕೆಲ ಹುಡುಗರ ನಡುವೆ ಗಲಾಟೆ ನಡೆಯುತಿತ್ತಂತೆ. ಆದ್ರೆ ಯಾವ ವಿಚಾರಕ್ಕೆ ಗಲಾಟೆಯಾಗುತಿತ್ತು ಅನ್ನೊದು ಮಾತ್ರ ಕುಟುಂಬಸ್ಥರಿಗೆ ಗೊತ್ತಿರಲಿಲ್ಲವಂತೆ. ಆದ್ರೆ ಮೊನ್ನೆ ನಡೆದ ಗಲಾಟೆ ವಿಚಾರ ಇಟ್ಟುಕೊಂಡು ಈ ಕೊಲೆ ಮಾಡಿರಬಹುದು ಅಂತ  ಕುಟುಂಬಸ್ಥರು ದೂರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments