Webdunia - Bharat's app for daily news and videos

Install App

ಸಂಭ್ರಮದ ಮನೆಯಲ್ಲಿ ಸ್ಮಶಾನದ ಮೌನ ತಾಳಿತು!?

Webdunia
ಬುಧವಾರ, 18 ಮೇ 2022 (12:17 IST)
ಚಾಮರಾಜನಗರ : ಆತ ಕೆಲಸ ಮುಗಿಸಿಕೊಂಡು ಮನೆಗೆ ಬಂದಿದ್ದನಂತೆ. ಅಷ್ಟರಲ್ಲೇ ಆತನ ಸ್ನೇಹಿತ ಫೋನ್ ಮನೆಯಿಂದ ಹೊರ ಬರಲು ಹೇಳಿದ್ದಾನೆ.
 
ಮನೆಯಿಂದ ಹೊರ ಬಂದವನು ನಡು ರಸ್ತೆಯಲ್ಲೇ ಭೀಕರವಾಗಿ ಕೊಲೆಯಾಗಿ ಹೋಗಿದ್ದಾನೆ. ಇದರಿಂದ ಇಡೀ ಊರೇ ಬೆಚ್ಚಿ ಬಿದ್ದಿದೆ. ಈ ಮನೆಯಲ್ಲಿ ಇನ್ನೆರಡು ದಿನದಲ್ಲಿ ಸಂಭ್ರಮ ಮನೆ ಮಾಡಬೇಕಿತ್ತು. ಆದ್ರೆ ಇದೀಗಾ ಆ ಮನೆ ಸ್ಮಶಾನ ಮೌನ ಆವರಿಸಿದೆ.

ಸಂಭ್ರಮದಲ್ಲಿರಬೇಕಾದ ಮನೆಯವರೆಲ್ಲ ಕಣ್ಣೀರ ಕೋಡಿ ಹರಿಸುತ್ತಿದ್ದಾರೆ.ಹೌದು, ಇಷ್ಟಕ್ಕೆಲ್ಲ ಕಾರಣ ಈ ಬೀಕರ ಹತ್ಯೆ.ಈತನ ಹೆಸರು ಸಂಜಯ್ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ನಿವಾಸಿ. ಗುಂಡ್ಲುಪೇಟೆ ತರಕಾರಿ ಮಾರುಕಟ್ಟೆಯಲ್ಲಿ ಈತ ಕೆಲಸ ಮಾಡಿಕೊಂಡಿದ್ದನಂತೆ.  ಆದ್ರೆ ನಿನ್ನೆ(ಸೋಮವಾರ) ರಾತ್ರಿ ಸ್ನೇಹಿತರೆ ಈತನಿಗೆ ಸ್ಕೆಚ್ ಹಾಕಿ ಕೊಲೆ ಮಾಡಿದ್ದಾರೆ.

ಹೌದು, ನಿನ್ನೆ ರಾತ್ರಿ ಸಂಜಯ್ ಕೆಲಸ ಮುಗಿಸಿಕೊಂಡು ಸಂಜಯ್ ಮನೆಗೆ ಬಂದಿದ್ದನಂತೆ. ಇನ್ನೆನು ಒಂದೆರೆಡು ದಿನದಲ್ಲಿ ಈತನ ಎಂಗೇಜ್ಮೆಂಟ್ ನಡೆಯಬೇಕಿತ್ತು. ಇದರ ಖುಷಿಯಲ್ಲಿ ಮನೆಯವರೆಲ್ಲ ಇದ್ದರು. ಈ ವೇಳೆ ಸ್ನೇಹಿತನೊಬ್ಬ ಕರೆ ಮಾಡಿ ತಮ್ಮ ಬೀದಿಯ ಅರಳಿ ಕಟ್ಟೆಯ ಬಳಿಗೆ ಬರಲು ಹೇಳಿದ್ದಾನೆ.

ಅದರಂತೆ ಅರಳಿ ಕಟ್ಟೆ ಬಳಿಗೆ ಬಂದವನಿಗೆ ಅಲ್ಲೆ ಇದ್ದ ಅಭಿಲಾಷ್ ಎಂಬಾತ ಎದೆಯ ಭಾಗಕ್ಕೆ ಚಾಕು ಹಾಕಿದ್ದಾನೆ. ಅಲ್ಲೆ ಇದ್ದವರು ನೋಡ ನೋಡುತ್ತಿದ್ದಂತೆ ಸಂಜಯ್ ಕೊಲೆಯಾಗಿ ಹೋಗಿದ್ದಾನೆ. ಸ್ನೇಹದ ಹೆಸರಿನಲ್ಲಿ ಕರೆದು ಕೊಲೆ ಮಾಡಿದ್ದಾರೆ ಅಂತ ಕುಟುಂಬಸ್ಥರು ಇಡೀ ಶಾಪ ಹಾಕಿದ್ರು.

ಕೊಲೆಗೆ ಈ ವರೆಗು ಯಾರಿಗು ಸರಿಯಾದ ಮಾಹಿತಿ ಇಲ್ಲ.ಮೊನ್ನೆ ಗುಂಡ್ಲುಪೇಟೆಯಲ್ಲಿ ನಡೆದ ಪಟ್ಟಲದಮ್ಮ ಜಾತ್ರೆಯಲ್ಲಿ ಸಂಜಯ್ ಹಾಗೂ ಕೆಲ ಹುಡುಗರ ನಡುವೆ ಗಲಾಟೆಯಾಗಿತ್ತಂತೆ.ಇದೇ ರೀತಿ ಈ ಹಿಂದೆ ಕೂಡ ಸಂಜಯ್ ಹಾಗೂ ಕೆಲ ಹುಡುಗರ ನಡುವೆ ಗಲಾಟೆ ನಡೆಯುತಿತ್ತಂತೆ. ಆದ್ರೆ ಯಾವ ವಿಚಾರಕ್ಕೆ ಗಲಾಟೆಯಾಗುತಿತ್ತು ಅನ್ನೊದು ಮಾತ್ರ ಕುಟುಂಬಸ್ಥರಿಗೆ ಗೊತ್ತಿರಲಿಲ್ಲವಂತೆ. ಆದ್ರೆ ಮೊನ್ನೆ ನಡೆದ ಗಲಾಟೆ ವಿಚಾರ ಇಟ್ಟುಕೊಂಡು ಈ ಕೊಲೆ ಮಾಡಿರಬಹುದು ಅಂತ  ಕುಟುಂಬಸ್ಥರು ದೂರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments