Publish Date: Sun, 26 Jul 2026 (12:35 IST)
Updated Date: Sun, 26 Jul 2026 (12:38 IST)
ಬೆಂಗಳೂರು: ರಾಜ್ಯದಲ್ಲಿ ಬರದಿಂದಾಗಿ ಅತ್ಯಂತ ಕಷ್ಟಕರ ಸಮಯವನ್ನು ಎದುರಿಸುತ್ತಿದ್ದೇವೆ. ಕೇಂದ್ರ ಸರ್ಕಾರ ಕನಿಷ್ಠ ಈ ಸಂದರ್ಭದಲ್ಲಾದ್ರೂ ನಮ್ಮೆಲ್ಲರಿಗೆ ನೆರವಾಗಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದರು.
ರಾಜ್ಯದಲ್ಲಿ ಬರ ಪರಿಸ್ಥಿತಿ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ದೆಹಲಿಯ ಕರ್ನಾಟಕ ಭವನದಲ್ಲಿ ರಾಜ್ಯದ ಎಲ್ಲಾ ಸಂಸದರ ಉನ್ನತ ಮಟ್ಟದ ಸಭೆ ಕರೆದಿದ್ದೀನಿ.
ಸಭೆಯಲ್ಲಿ ಬರದ ವಿಚಾರ ಚರ್ಚೆ ಮಾಡಲಿದ್ದೇವೆ ಎಂದು ಮಾಹಿತಿ ನೀಡಿದರು.
ಇನ್ನೂ ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಸುಮಾರು ಏಳು ಅಥವಾ ಎಂಟು ಸಚಿವರು ದೆಹಲಿಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯಕ್ಕೆ ಸಂಬಂಧಿಸಿದ ವಿವಿಧ ಪ್ರಮುಖ ವಿಚಾರಗಳನ್ನ ಕೇಂದ್ರ ಸರ್ಕಾರದ ಮುಂದಿಡಲು ನಾವು ಬಯಸಿದ್ದೇವೆ.
ರಾಜ್ಯದ ಹಿತದೃಷ್ಟಿಯಿಂದ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಾರೆ ಎಂಬ ವಿಶ್ವಾಸ ನನಗಿದೆ. ಏಕೆಂದರೆ ಬರ ಪರಿಸ್ಥಿತಿಯಿಂದ ನಾವು ಅತ್ಯಂತ ಕಷ್ಟಕರ ಸಮಯವನ್ನ ಎದುರಿಸುತ್ತಿದ್ದೇವೆ.
ಇಂತಹ ಕಷ್ಟದ ಸಮಯದಲ್ಲಿದೆ ನಮ್ಮೆಲ್ಲರಿಗೂ ನೆರವಾಗಬೇಕು. ಅದಕ್ಕಾಗಿಯೇ ನಾನು ನಮ್ಮ ಸಂಸದರನ್ನ ಸಭೆಗೆ ಕರೆದಿದ್ದೇನೆ. ನಂತರ ಎಲ್ಲಾ ಪಕ್ಷಗಳ ನಾಯಕರನ್ನೂ ಭೇಟಿ ಮಾಡಲಿದ್ದೇನೆ ಎಂದು ಮಾಹಿತಿ ನೀಡಿದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ