ಯಕ್ಷಗಾನ ಬಣ್ಣ ಕಳಚುವ ಮುನ್ನವೇ ಹೃದಯಾಘಾತದಿಂದ ನಿಧನರಾದ ಮಹಿಷಾಸುರ ಪಾತ್ರದಾರಿ

Sampriya
ಗುರುವಾರ, 20 ನವೆಂಬರ್ 2025 (14:55 IST)
Photo Credit X
ಉಡುಪಿ: ಮಂದಾರ್ತಿ ಮೇಳದ ಹಿರಿಯ ಕಲಾವಿದ ಈಶ್ವರ ಗೌಡ ಅವರು ಹೃದಯಾಘಾತದಿಂದ ಬುಧವಾರ ರಾತ್ರಿ ನಿಧನರಾಗಿದ್ದಾರೆ. ಮಹಿಷಾಸುರ ಪಾತ್ರದ ಪ್ರದರ್ಶನದ ನಂತರ ಹೃದಯಾಘಾತದಿಂದ ನಿಧನರಾದರು. 

ಮಹಿಷಾಸುರ ಪಾತ್ರದಲ್ಲಿ ಅದ್ಭುತ ನಟನೆ ನೀಡಿ, ಪ್ರಸಂಗ ಮುಗಿಸಿ ವೇಷ ಕಳಚುತ್ತಿದ್ದಂತೆಯೇ ಈಶ್ವರ ಗೌಡ ಅಸ್ವಸ್ಥರಾಗಿದ್ದಾರೆ. ತಕ್ಷಣ ಅವರನ್ನ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದ್ರೂ ಆ ವೇಳೆಗೆ ದಾರಿಯಲ್ಲೇ ಅವರು ನಿಧನರಾಗಿದ್ದಾರೆ.

ವಿಶೇಷವೆಂದರೆ, ಅದೇ ಮಂದಾರ್ತಿ ಮೇಳದಲ್ಲಿ ಈಶ್ವರ ಗೌಡ ಅವರ ತಂದೆ ಕೂಡ ಹಿರಿಯ ವೇಷಧಾರಿಯಾಗಿದ್ದು, ಪ್ರತಿ ಪ್ರದರ್ಶನದಲ್ಲೂ ಚೌಕಿಯಲ್ಲಿ ತಂದೆಯ ಆಶೀರ್ವಾದ ಪಡೆದು ನಂತರವೇ ಮಗ ಪಾತ್ರನಿರ್ವಹಿಸುತ್ತಿದ್ದರಂತೆ. ಬುಧವಾರ ಕೂಡ ಕೊನೆಯ ಆಶೀರ್ವಾದವೆಂಬಂತೆ ತಂದೆಯ ಕಾಲು ಮುಟ್ಟೀ ನಮಸ್ಕರಿಸಿ ಪಾತ್ರ ನಿರ್ವಹಿಸಿದ್ದರು. 

ಪಾತ್ರ ಮುಗಿಸಿ ತಂದೆಯ ಬಳಿ ಮರಳಿ ಬರುವ ಮೊದಲೇ ಜೀವ ಬಿಟ್ಟಿದ್ದಾರೆ. ಈಶ್ವರ ಗೌಡರ ಅಕಾಲಿಕ ನಿಧನಕ್ಕೆ ಯಕ್ಷಗಾನದ ಪ್ರೇಮಿಗಳು, ಮಂದಾರ್ತಿ ಮೇಳದ ಕಲಾವಿದರು ಕಂಬನಿ ಮಿಡಿದಿದ್ದಾರೆ.
 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments