Webdunia - Bharat's app for daily news and videos

Install App

ಸಿಗರೇಟ್ ವಿಚಾರಕ್ಕೆ ನಡೆದಿದೆ ಇಂತಹ ಹೀನ ಕೃತ್ಯ

Webdunia
ಶನಿವಾರ, 22 ಡಿಸೆಂಬರ್ 2018 (06:36 IST)
ಬೆಂಗಳೂರು : ಸಾಲಕ್ಕೆ ಸಿಗರೇಟ್ ಕೊಡುವುದಿಲ್ಲವೆಂದು ಹೇಳಿದ್ದಕ್ಕೆ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಕಿಡಿಗೇಡಿಗಳ ಗ್ಯಾಂಗ್ ವೊಂದು ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ನಗರ ಹೊರವಲಯದ ಕೆ.ಆರ್.ಪುರದಲ್ಲಿ ನಡೆದಿದೆ.


ಕುಂದಾಪುರ ಮೂಲದ ಅಭಿನವ್ ಹಲ್ಲೆಗೆ ಒಳಗಾದ ಯುವಕ. ಕೆ.ಆರ್.ಪುರದ ಸೆಂಟ್ ಅಂತೋನಿ ಸ್ಕೂಲ್ ರಸ್ತೆಯಲ್ಲಿರುವ ಬೇಕರಿಯಲ್ಲಿ ಅಭಿನವ್ ಕೆಲಸ ಮಾಡುತ್ತಿದ್ದ. ಅಲ್ಲಿಗೆ ಪುಂಡರ ಗ್ಯಾಂಗೊಂದು ಬಂದು ಸಾಲಕ್ಕೆ ಸಿಗರೇಟ್ ನೀಡುವಂತೆ ಕೇಳಿದ್ದಾರೆ. ಇದಕ್ಕೆ ಅಭಿನವ್ ಒಪ್ಪದಿದ್ದಾಗ ಕೋಪಗೊಂಡ ಗ್ಯಾಂಗ್ ನವರು ಬೇಕರಿಗೆ ನುಗ್ಗಿ ಗ್ಲಾಸು ಹಾಗೂ ಬೆಲೆ ಬಾಳುವ ವಸ್ತುಗಳನ್ನು ಪುಡಿಪುಡಿ ಮಾಡಿದ್ದಲ್ಲದೆ ಅಭಿನವ್ ಮೇಲೂ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ.


ಈ ಘಟನೆಯ ಬಗ್ಗೆ ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ ಕೂಡ ಪೊಲೀಸರು ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ, ಈ ಕುರಿತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments