Select Your Language

Notifications

webdunia
webdunia
webdunia
webdunia

ಗೌರಿಲಂಕೇಶ್ ಆರೋಪಿಗಳ ಸುಳಿವು ಲಭ್ಯ, ಶೀಘ್ರ ಬಹಿರಂಗ– ಸಿಎಂ

ಗೌರಿಲಂಕೇಶ್ ಆರೋಪಿಗಳ ಸುಳಿವು ಲಭ್ಯ, ಶೀಘ್ರ ಬಹಿರಂಗ– ಸಿಎಂ
ಸಾಗರ , ಶನಿವಾರ, 6 ಜನವರಿ 2018 (15:19 IST)
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳ ಸುಳಿವು ಸಿಕ್ಕಿದ್ದು, ಶೀಘ್ರದಲ್ಲೇ ಬಹಿರಂಗಪಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 
 
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಹೆಲಿಪ್ಯಾಡ್‍ನಲ್ಲಿ ಮಾತನಾಡಿದ ಅವರು, ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‍ಐಟಿ) ಪ್ರಮುಖ ಆರೋಪಿಗಳು ಯಾರೆಂಬುದನ್ನು ಪತ್ತೆಹಚ್ಚಿದ್ದಾರೆ. ಸದ್ಯದಲ್ಲೇ ಸಾಕ್ಷಾಧಾರಗಳೊಂದಿಗೆ ಎಲ್ಲವೂ ಬಹಿರಂಗವಾಗಲಿದೆ ಎಂದಿದ್ದಾರೆ.
 
ಇದೊಂದು ಪೂರ್ವ ನಿಯೋಜಿತ ಕೃತ್ಯ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಹಲವಾರು ಅಪರಾಧಿ ಚಟುವಟಿಕೆಗಳಲ್ಲಿ ಭಾಗಯಾಗಿರುವ ಆರೋಪಿಗಳೇ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿರುವ ಶಂಕೆಯಿದೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಆರ್‌ಎಸ್‌ಎಸ್ ನಿಷೇಧ ಮಾಡುವುದಾಗಿ ಎಲ್ಲಿಯೂ ಹೇಳಿಲ್ಲ– ಸಿಎಂ