Webdunia - Bharat's app for daily news and videos

Install App

ಕೆ.ಆರ್.ಎಸ್ ಸಾರ್ವಜನಿಕರ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲು ಸಿಎಂ ಸೂಚನೆ

Webdunia
ಭಾನುವಾರ, 12 ಆಗಸ್ಟ್ 2018 (15:28 IST)
ಕೆ.ಆರ್.ಎಸ್. ಜಲಾಶಯ ವೀಕ್ಷಣೆಗೆ ಸಾರ್ವಜನಿಕರಿಗೂ ಅವಕಾಶ ಕಲ್ಪಿಸುವಂತೆ ಅಧಿಕಾರಿಗಳಿಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

ಸೀತಾಪುರದಲ್ಲಿ ನಾಟಿ ಕಾರ್ಯ ಮುಗಿಸಿದ ಬಳಿಕ  ಚುಂಚನಗಿರಿ ಶ್ರೀಗಳೊಂದಿಗೆ ಕೆ ಆರ್ ಎಸ್ ಗೆ ಆಗಮಿಸಿದ‌ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮಂಡ್ಯ ಜಿಲ್ಲೆಯ ಜೀವನಾಡಿ ಕೆ.ಆರ್.ಎಸ್ ಅಣೆಕಟ್ಟೆ ವೀಕ್ಷಣೆ ಮಾಡಿದ್ರು, ಇದೇ ವೇಳೆ ಕೆ ಆರ್ ಎಸ್ ಡ್ಯಾಂ ನ ಗೇಟ್ ಗಳ ಬಳಿ ತೆರಳಿದ ಸಿಎಂ ಹೆಚ್ಡಿಕೆ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದ ಶ್ರೀಗಳೊಂದಿಗೆ ಗೇಟ್‌ಗಳ ಬಳಿಯಿರುವ ಜಾಗದಲ್ಲಿ ಕುಳಿತು ಕೆಲಸಮಯ ಕಳೆದರು. ಆ ಬಳಿಕ ಡ್ಯಾಮ್ ವೀಕ್ಷಣೆಗೆ ಸಾರ್ವಜನಿಕರಿಗೂ ವ್ಯವಸ್ಥೆ ಕಲ್ಪಿಸುವಂತೆ ನೀರಾವರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ವೇಳೆ ಸಿಎಂ ಕುಮಾರಸ್ವಾಮಿ ಗೆ ಶಾಸಕರು‌ ಹಾಗೂ ಜಿಲ್ಲೆಯ ಸಚಿವರು ಕೂಡ ಸಾಥ್ ನೀಡಿದರು. ಸಿಎಂ ಹೇಳಿಕೆಯಿಂದ ಪ್ರವಾಸಿಗರು ಹಾಗೂ ಸಾರ್ವಜನಿಕರು ಖುಷ್ ಆದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments