Webdunia - Bharat's app for daily news and videos

Install App

ವಿಮಾನ ಹಾರಿಸಿದ ಸಿಎಂ, ದೇವರನ್ನೇ ಮಾಯ ಮಾಡಿದ ಅಧಿಕಾರಿಗಳು

Webdunia
ಶನಿವಾರ, 23 ನವೆಂಬರ್ 2019 (22:26 IST)
ವಿಮಾನ ನಿಲ್ದಾಣವನ್ನು ಸಿಎಂ ಲೋಕಾರ್ಪಣೆಗೊಳಿಸಿದ್ರೆ, ಅಲ್ಲಿನ ದೇವರನ್ನು ಅಧಿಕಾರಿಗಳು ಮಾಯ ಮಾಡಿರೋ ಆರೋಪ ಕೇಳಿಬಂದಿದೆ.

ಕಲಬುರಗಿ ವಿಮಾನ ನಿಲ್ದಾಣದಿಂದ ವಾಣಿಜ್ಯ ಕಾರ್ಯಾಚರಣೆ ಕೈಗೊಳ್ಳುವ ಪೂರ್ವ ಡಿಜಿಸಿಎ‌ ನಿರ್ದೇಶನದಂತೆ ಸುರಕ್ಷತಾ ದೃಷ್ಠಿಯಿಂದ ರನ್ ವೇಗೆ ತುಂಬಾ ಹತ್ತಿರದಲ್ಲಿದ್ದ ಧಾರ್ಮಿಕ‌ ದೇವಸ್ಥಾನವನ್ನು ಸುರಕ್ಷತಾ ದೃಷ್ಟಿಯಿಂದ  ತೆರವುಗೊಳಿಸಿ ಧಾರ್ಮಿಕ ವಿಧಿ-ವಿಧಾನದಂತೆ ವಿಗ್ರಹವನ್ನು ಜಲಕ್ಕೆ ಸಮರ್ಪಿಸಲಾಗಿದೆ ಎಂದು ವಿಮಾನ ನಿಲ್ದಾಣಗಳ ಪ್ರಾಧಿಕಾರ ( ಎಎಐ) ಸ್ಪಷ್ಟಪಡಿಸಿದೆ.

ಕಲಬುರಗಿ ವಿಮಾನ‌ ನಿಲ್ದಾಣವನ್ನು  ಸಂಪೂರ್ಣವಾಗಿ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸಿದ ನಂತರ ವಾಣಿಜ್ಯ ಕಾರ್ಯಾಚರಣೆ ಮತ್ತು ನಿರ್ವಹಣೆಗೆ
742 ಎಕರೆ ಸ್ಥಿರಾಸ್ತಿಯೊಂದಿಗೆ ಸಂಪೂರ್ಣ ಪ್ರದೇಶದ ಮಾಲೀಕತ್ವವನ್ನು  ಅಧಿಕೃತವಾಗಿ ತಮಗೆ ಈಗಾಗಲೇ ಹಸ್ತಾಂತರಿಸಲಾಗಿದ್ದು, ಸದರಿ ಪ್ರದೇಶದ ಮಾಲೀಕತ್ವವು ಈಗ ನಮ್ಮದ್ದಾಗಿರುತ್ತದೆ ಎಂದು ಎಎಐ ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನ ನಿಲ್ದಾಣ ಪ್ರದೇಶ ತಮ್ಮ ವಶಕ್ಕೆ ಪಡೆದ ನಂತರ ವಾಣಿಜ್ಯ ವಿಮಾನ‌ ಸಂಚಾರಕ್ಕೆ ಡಿಜಿಸಿಎ ಅವರಿಗೆ ಅನುಮತಿ ಕೋರಿದ ಮೇಲೆ ವಿಮಾನ ನಿಲ್ದಾಣ ಪರಿಶೀಲನೆಗೆ ಬಂದ ಡಿಜಿಸಿಎ ತಂಡ ರನ್ ವೇ ಬಳಿ ಇರುವ ಧಾರ್ಮಿಕ ದೇವಸ್ಥಾನವನ್ನು ಸುರಕ್ಷತಾ ದೃಷ್ಢಿಯಿಂದ ತೆರವುಗೊಳಿಸಲು ತಿಳಿಸಿದ್ದರಿಂದ ತೆರವಿಗೆ ಕ್ರಮಕೈಗೊಳ್ಳಲಾಯಿತು ಎಂದು ಹೇಳಿದರು.

ಕಲಬುರಗಿ ವಿಮಾನ ನಿಲ್ದಾಣ ಸ್ಥಾಪನೆಗಾಗಿ ಈ ಹಿಂದೆ ಭೂಸ್ವಾಧೀನ ಪ್ರಕ್ರಿಯೆ ಕೈಗೊಂಡ ಸಂದರ್ಭದಲ್ಲಿ ಭೂಮಿ ಕಳೆದುಕೊಂಡ ಗ್ರಾಮಸ್ಥರಿಗೆ ಸರ್ಕಾರದಿಂದ ನೂತನ ಗ್ರಾಮದಲ್ಲಿ ಪುನರ್ ವಸತಿ ಕಲ್ಪಿಸಿ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳು ಹಾಗೂ ಧಾರ್ಮಿಕ ಕಾರ್ಯಗಳಿಗಾಗಿ ಪ್ರತ್ಯೇಕ ದೇವಸ್ಥಾನವನ್ನು ಸಹ ನಿರ್ಮಿಸಲಾಗಿರುತ್ತದೆ. ಆ ಸಂದರ್ಭದಲ್ಲಿ ಉದ್ದೇಶಿತ‌ ವಿಮಾನ‌ ನಿಲ್ದಾಣ ಪ್ರದೇಶದಲ್ಲಿದ್ದ ಹಳೇ ದೇವಸ್ಥಾನದಲ್ಲಿನ ವಿಗ್ರಹವನ್ನು ಪುನರ್ ವಸತಿ ಕಲ್ಪಿಸಿರುವ ನೂತನ ದೇವಾಸ್ಥಾನಕ್ಕೆ ಸ್ಥಳಾಂತರಿಸುವಂತೆ ಗ್ರಾಮಸ್ಥರಲ್ಲಿ ಮನವಿ ಮಾಡಿಕೊಂಡಾಗ, ಗ್ರಾಮಸ್ಥರು
ಹೊಸದಾಗಿ ನಿರ್ಮಾಣವಾಗಿದ್ದ ದೇವಸ್ಥಾನದಲ್ಲಿ ಹಳೆಯ ವಿಗ್ರಹವನ್ನು ಸ್ಥಾಪಿಸಲು ಬರುವುದಿಲ್ಲ. ಆದ್ದರಿಂದ ನೀವು ಇದ್ದ ವಿಗ್ರಹವನ್ನು ತೆಗೆದು ವಿಧಿವತ್ತಾಗಿ ವಿಸರ್ಜನೆ ಮಾಡಲು ನಮ್ಮ ಅಭ್ಯಂತರವಿಲ್ಲ ಎಂಬುದಾಗಿ ತಿಳಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೀಗ ವಾಣಿಜ್ಯ ಸಂಚಾರ ಅರಂಭದ ಮುನ್ನ ಡಿಜಿಸಿಎ ನಿರ್ದೇಶನದಂತೆ ದೇವಸ್ಥಾನ ತೆರವುಗೊಳಿಸಲಾಗಿದೆ ಎಂದು ಸ್ಪಷ್ಟ ನೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments