Webdunia - Bharat's app for daily news and videos

Install App

ರಾಜ್ಯ ಸರ್ಕಾರವನ್ನು ಟೀಕಿಸಿದ ಬಿಎಸ್ ವೈ ಮೇಲೆ ಗರಂ ಆದ ಸಿಎಂ

Webdunia
ಮಂಗಳವಾರ, 30 ಏಪ್ರಿಲ್ 2019 (07:32 IST)
ಬೆಂಗಳೂರು : ರಾಜ್ಯ ಸರ್ಕಾರವನ್ನು ಟೀಕೆ ಮಾಡಿದ ಬಿಎಸ್ ಯಡಿಯೂರಪ್ಪ ವಿರುದ್ಧ ಸಿಎಂ ಎಚ್‍.ಡಿ. ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂ ಕುಮಾರಸ್ವಾಮಿ 5 ದಿನಗಳ ಕಾಲ  ಪ್ರಕೃತಿ ಚಿಕಿತ್ಸೆ ಪಡೆಯಲು  ಉಡುಪಿಗೆ ತೆರಳಿದ್ದಕ್ಕೆ ಕಿಡಿಕಾರಿದ ಬಿಎಸ್ ಯಡಿಯೂರಪ್ಪ ಅವರು, ರಾಜ್ಯವು ಬರದಿಂದ ತತ್ತರಿಸುವಾಗ ರಾಜ್ಯ ಸರ್ಕಾರ ಮೋಜು ಮಸ್ತಿಯಲ್ಲಿ ಮೈಮರೆತಿದೆ ಎಂದು ಟೀಕಿಸಿದ್ದಾರೆ.

 

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ, ಮಾನ್ಯ ವಿರೋಧ ಪಕ್ಷದ ನಾಯಕರು ಮಾಡಿರುವ ಟೀಕೆ ಹಾಸ್ಯಾಸ್ಪದವಾಗಿದೆ. ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಟೆಂಡರ್ ಕರೆಯಲು ಅನುಮತಿ ನೀಡಬಾರದು ಎಂದು ಮುಖ್ಯ ಚುನಾವಣಾಧಿಕಾರಿಗಳಿಗೆ ಬಿಎಸ್‍ವೈ ಪತ್ರ ಬರೆದಿದ್ದರು. ಈಗ ಟೀಕೆ ಮಾಡಿರುವುದು ಅವರ ನಿರಂತರ ಇಬ್ಬಗೆ ನೀತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಕಿಡಿಕಾರಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments