Select Your Language

Notifications

webdunia
webdunia
webdunia
webdunia

ವರ್ಗಾವಣೆಯಲ್ಲಿ ಆಯೋಗ ಮೂಗು ತೂರಿಸಬಾರದು– ಸಿದ್ದರಾಮಯ್ಯ

ವರ್ಗಾವಣೆಯಲ್ಲಿ ಆಯೋಗ ಮೂಗು ತೂರಿಸಬಾರದು– ಸಿದ್ದರಾಮಯ್ಯ
ಮೈಸೂರು , ಬುಧವಾರ, 24 ಜನವರಿ 2018 (10:22 IST)
ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಯಲ್ಲಿ ಚುನಾವಣೆಯ ಆಯೋಗ ಮೂಗು ತೂರಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಜಿಲ್ಲಾಧಿಕಾರಿಯ ವರ್ಗಾವಣೆಯಲ್ಲಿ ಯಾವುದೇ ನಿಯಮವನ್ನು ಉಲ್ಲಂಘನೆ ಮಾಡಿಲ್ಲ. ಆಡಳಿತ ದೃಷ್ಠಿಯಿಂದ ರಾಜ್ಯ ಸರ್ಕಾರ ಕೈಗೊಂಡ ಕ್ರಮ ಸಮರ್ಥನೀಯವಾಗಿದೆ. ರಾಜ್ಯದಲ್ಲಿ ಚುನಾವಣೆ ಇನ್ನೂ ಘೋಷಣೆಯಾಗಿಲ್ಲ. ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮಾಡುತ್ತಾರೆ ಎಂದಿದ್ದಾರೆ.
 
ರೋಹಿಣಿ ಸಿಂಧೂರಿ ಒಬ್ಬರೇ ಪ್ರಾಮಾಣಿಕ ಅಧಿಕಾರಿಯೇ ಎಂದು ದೇವೇಗೌಡ ಆರೋಪಕ್ಕೆ ಸಂಬಂಧಿಸಿ ಪ್ರಶ್ನಿಸಿದ್ದಾರೆ. ನಿಗದಿಯಂತೆಯೇ ಬಜೆಟ್ ಮಂಡನೆ ಮಾಡಲಾಗುವುದು, ಬಜೆಟ್‌ಗೂ ಚುನಾವಣೆಗೂ ಸಂಬಂಧವಿಲ್ಲ. ಈ ಹಿಂದೆಯೂ ಇಂತಹ ಪರಿಸ್ಥಿತಿಯಲ್ಲಿ ಬಜೆಟ್ ಮಂಡನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಎಷ್ಟು ಮಕ್ಕಳಿಗೆ ಜನ್ಮ ನೀಡ್ತೀರಿ ಎಂದು ವಿದ್ಯಾರ್ಥಿನಿಯರನ್ನು ಕೇಳಿದ ಪ್ರಾಚಾರ್ಯ