Webdunia - Bharat's app for daily news and videos

Install App

ಚರ್ಚೆಯಿಲ್ಲದೆ ಬಜೆಟ್ ಗೆ ಅಸ್ತು ಎಂದ ಸಮಿತಿ

Webdunia
ಗುರುವಾರ, 14 ಫೆಬ್ರವರಿ 2019 (16:49 IST)
ಬಿಜೆಪಿ ಸದಸ್ಯರ ಪ್ರತಿಭಟನೆಯ ನಡುವೆಯೇ ಮೈತ್ರಿ ಸರಕಾರದ ಬಜೆಟ್ ಯಾವುದೇ ಚರ್ಚೆ ಇಲ್ಲದೇ ಅಂಗೀಕಾರ ಪಡೆದುಕೊಂಡಿತು.

ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರ ಧರಣಿ ಇಂದೂ ಮುಂದುವರೆದಿದ್ದು ಗದ್ದಲ, ಕೋಲಾಹಲಗಳ ನಡುವೆಯೇ ರಾಜ್ಯಪಾಲರ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯ ಹಾಗೂ ಸಾಲಿನ ಬಜೆಟ್ಗೆ ಯಾವುದೇ ಚರ್ಚೆ ಇಲ್ಲದೆ ಸದನ ಒಪ್ಪಿಗೆ ನೀಡಿತು.
ಆಪರೇಷನ್ ಕಮಲ ಆಡಿಯೋ ಹಗರಣ ಎಸ್ಐಟಿ ತನಿಖೆಗೆ ಬೇಡ ಹಾಗೂ ಬಿಜೆಪಿ ಶಾಸಕ ಪ್ರೀತಂಗೌಡ ರವರ ಮನೆಯ ಮೇಲೆ ನಡೆದಿರುವ ದಾಂಧಲೆ ಪ್ರಕರಣವನ್ನು ಖಂಡಿಸಿ ಬಿಜೆಪಿ ಸದಸ್ಯರು ವಿಧಾನಸಭೆಯಲ್ಲಿ ಧರಣಿ ನಡೆಸಿದರು.

ಸದನದಲ್ಲಿ ಕೋಲಾಹಲದ ವಾತಾವರಣ ರೂಪುಗೊಂಡಿತು. ಗದ್ದಲದ ನಡುವೆಯೇ ರಾಜ್ಯಪಾಲರ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯವನ್ನು ಸದನ ದ್ವನಿಮತದಿಂದ ಅಂಗೀಕರಿಸಿತು. ಇದಾದ ನಂತರ ಸಭಾಧ್ಯಕ್ಷರು ಧನವಿನಿಯೋಗ ವಿಧೇಯಕ ಮಂಡಿಸುವಂತೆ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದರು. ಮುಖ್ಯಮಂತ್ರಿ ಕುಮಾರಸ್ವಾಮಿ  ಧನವಿನಿಯೋಗ ವಿಧೇಯಕ ಮಂಡಿಸಿದರು. ಗದ್ದಲದ ನಡುವೆ ದ್ವನಿ ಮತಕ್ಕೆ ಹಾಕಿದ ಸಭಾಧ್ಯಕ್ಷರು ವಿನಿಯೋಗಕ್ಕೆ ಸದನ ಒಪ್ಪಿಗೆ ನೀಡಿದೆ ಎಂದು ಹೇಳಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments