Webdunia - Bharat's app for daily news and videos

Install App

ಬಿಜೆಪಿಗೆ ನಡುಕ ಉಂಟಾಗಿದೆ ಎಂದ ಕಾಂಗ್ರೆಸ್ ಮುಖಂಡ

Webdunia
ಶನಿವಾರ, 26 ಜನವರಿ 2019 (16:54 IST)
ರಾಜಕೀಯದಲ್ಲಿ ಬಿಜೆಪಿಗೆ ನಡುಕ ಉಂಟಾಗಿದೆ. ಹೀಗಂತ ಕಾಂಗ್ರೆಸ್ ಹಿರಿಯ ನಾಯಕ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಪುತ್ರಿ ಪ್ರಿಯಾಂಕಗಾಂಧಿ ರಾಜಕೀಯ ಪ್ರವೇಶ ಮಾಡಿದ್ದಾರೆ. ಇದರಿಂದಾಗಿ ಬಿಜೆಪಿಗೆ ನಡುಕವುಂಟಾಗಿದೆ ಎಂದು ಲೋಕಸಭೆಯಲ್ಲಿನ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ ಗಾಂಧಿ ರಾಜಕೀಯಕ್ಕೆ ಪ್ರವೇಶಿಸಿರುವುದು ಯುವಕರಲ್ಲಿ ಹೊಸ ಉತ್ಸಾಹ ಮೂಡಿಸಿದೆ.  ಇದರಿಂದ ಪಕ್ಷಕ್ಕೆ ಹೆಚ್ಚಿನ ಲಾಭವಾಗಲಿದೆ ಎಂದೂ ಹೇಳಿದರು. ಶಾಸಕ ಉಮೇಶ್ ಜಾದವ್ ಅವರಿಗೆ ಸಚಿವ ಸ್ಥಾನ ತಪ್ಪಲು ತಾವು ಕಾರಣ ಎಂಬ ಆರೋಪಗಳನ್ನು ನಿರಾಕರಿಸಿದರು.

ಆರೋಪ ಮಾಡುವವರು ಮಾಡಲಿ ತಾವು 5 ದಶಕಗಳಿಂದ ಜನಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿದ್ದೇನೆ. ಇಂತಹ ಟೀಕೆಗಳನ್ನು ಸ್ವಾಗತಿಸುವುದಾಗಿ ತಿಳಿಸಿದರು. ಬರವಣಿಗೆಯಲ್ಲಿರುವ ಸಂವಿಧಾನ ಜಗತ್ತಿಗೆ ಮಾದರಿಯಾಗಿದೆ. ಆದರೆ ಸಂವಿಧಾನಕ್ಕೆ ಚ್ಯುತಿ ತರುವ ಕೆಲಸ ನಡೆಯುತ್ತಿದೆ.

ಆರೆಸ್ಸೆಸ್ ತನ್ನ ಸಿದ್ಧಾಂತವನ್ನು ಪ್ರಧಾನಿ ನರೇಂದ್ರಮೋದಿ ಅವರ ಮೂಲಕ ಅನುಷ್ಠಾನಗೊಳಿಸುವ ಯತ್ನ ಮಾಡುತ್ತಿದೆ ಎಂದು ಆರೋಪಿಸಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments