Webdunia - Bharat's app for daily news and videos

Install App

ಹೈಕೋರ್ಟ್ ತೀರ್ಪಿನಿಂದ ಕಾಂಗ್ರೆಸ್ ಪಕ್ಷಕ್ಕೆ ಛಡಿ ಏಟು ಬಿದ್ದಿದೆ: ಆರ್‌ ಅಶೋಕ್

Sampriya
ಮಂಗಳವಾರ, 24 ಸೆಪ್ಟಂಬರ್ 2024 (18:05 IST)
ಬೆಂಗಳೂರು:  ಘನತೆವೆತ್ತ ರಾಜ್ಯಪಾಲರು ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಕಾನೂನುಬದ್ಧವಾಗಿದೆ ಎಂದು ಮಾನ್ಯ ಹೈಕೋರ್ಟ್ ರಾಜ್ಯಪಾಲರ ನಿರ್ಧಾರವನ್ನ ಎತ್ತಿಹಿಡಿದಿದ್ದು, ಇದು ಸತ್ಯಕ್ಕೆ ಸಂದ ಜಯವಾಗಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಹೇಳಿದರು.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅವರು ಪೋಸ್ಟ್ ಹಂಚಿಕೊಂಡಿದ್ದಾರೆ.

ಆರ್‌ ಅಶೋಕ್‌ ಪೋಸ್ಟ್‌ನಲ್ಲಿ ಹೀಗಿದೆ: ಘನತೆವೆತ್ತ ರಾಜ್ಯಪಾಲರು ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ
 ನವರ ವಿರುದ್ಧ ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಕಾನೂನುಬದ್ಧವಾಗಿದೆ ಎಂದು ಮಾನ್ಯ
ಹೈಕೋರ್ಟ್ ರಾಜ್ಯಪಾಲರ ನಿರ್ಧಾರವನ್ನ ಎತ್ತಿಹಿಡಿದಿದ್ದು, ಇದು ಸತ್ಯಕ್ಕೆ ಸಂದ ಜಯವಾಗಿದೆ.

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಾಗಿನಿಂದ ಮುಖ್ಯಮಂತ್ರಿ ಆದಿಯಾಗಿ, ಸಚಿವರು, ಶಾಸಕರು ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಕಳೆದ ಅನೇಕ ದಿನಗಳಿಂದ ರಾಜ್ಯಪಾಲರನ್ನ, ರಾಜಭವನವನ್ನ ನಿಂದಿಸುತ್ತಾ ಬಂದಿದ್ದು, ಮಾನ್ಯ ಹೈಕೋರ್ಟ್ ನ ತೀರ್ಪು ಇಡೀ ಕಾಂಗ್ರೆಸ್ ಪಕ್ಷಕ್ಕೆ ಛಡಿ ಏಟು ಕೊಟ್ಟಿದೆ.

ಇನ್ನಾದರೂ ಅನಗತ್ಯವಾಗಿ ರಾಜ್ಯಪಾಲರನ್ನ ನಿಂದಿಸುವುದು ಬಿಟ್ಟು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕೆ ಹೊಣೆ ಹೊತ್ತು
ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತೇನೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments