Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಪಕ್ಷ ದಿಕ್ಕು ದೆಸೆಯಿಲ್ಲದ ಪಕ್ಷವಾಗಿದೆ- ಆರ್. ಅಶೋಕ್ ವ್ಯಂಗ್ಯ

ಕಾಂಗ್ರೆಸ್ ಪಕ್ಷ ದಿಕ್ಕು ದೆಸೆಯಿಲ್ಲದ ಪಕ್ಷವಾಗಿದೆ- ಆರ್. ಅಶೋಕ್ ವ್ಯಂಗ್ಯ
ಕೋಲಾರ , ಭಾನುವಾರ, 22 ಸೆಪ್ಟಂಬರ್ 2019 (15:05 IST)
ಕೋಲಾರ : ಕಾಂಗ್ರೆಸ್ ಪಕ್ಷ ದಿಕ್ಕು ದಸೆಯಿಲ್ಲದ ಪಕ್ಷವಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಅವರು ಲೇವಡಿ ಮಾಡಿದ್ದಾರೆ.



ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಹೊಂದಾಣಿಕೆ ಇಲ್ಲ. ಶನಿವಾರ ಕಾಂಗ್ರೆಸ್ ಪಾರ್ಟಿಗೆ ಅವರ ಅಧ್ಯಕ್ಷರೇ ಬಂದಿಲ್ಲ, ಇನ್ನು ರಣಕಹಳೆ ಎಲ್ಲಿ? ಎಂದು ಪ್ರಶ್ನಿಸಿದ ಅವರು, ಎರಡು ತಿಂಗಳಾದರೂ ಕಾಂಗ್ರೆಸ್ಸಿಗೆ ವಿರೋಧ ಪಕ್ಷದ ನಾಯಕರ ಆಯ್ಕೆ ಮಾಡೋ ಯೋಗ್ಯತೆ ಇಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿರುವುದರಿಂದ ರಣವೂ ಇಲ್ಲ, ಕಹಳೆಯೂ ಇಲ್ಲ. ಎಂದು ವ್ಯಂಗ್ಯ ಮಾಡಿದ್ದಾರೆ.


ಅಲ್ಲದೇ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರೇ ರಾಜಿನಾಮೆ ಕೊಟ್ಟಿದ್ದು, ಆ ಪಕ್ಷ ದಿಕ್ಕು ದಸೆಯಿಲ್ಲದ ಪಕ್ಷವಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದವರು ಬಾಯ್ ಬಾಯ್ ಅಂದವರು ಈಗ ವಿಲನ್ ವಿಲನ್ ಆಗಿದ್ದಾರೆ. ಜೆಡಿಎಸ್ ಅವರಿಗೆ ಒಳಗೆ ಚೂರಿ ಹಾಕಿದವರು ಯಾರು ಎಂದು ಗೊತ್ತು ಎಂದು ಅವರು ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯನವರ ಪುತ್ರ ರಾಕೇಶ್ ಸಾವಿನ ಕಾರಣ ಬಿಚ್ಚಿಟ್ಟ ಎಂಟಿಬಿ ನಾಗರಾಜ್